Homeಕರ್ನಾಟಕಬೀದಿ ಬದಿ ವ್ಯಾಪಾರಿಗಳ ಹಠಾತ್‌ ತೆರವು: ಬಿಬಿಎಂಪಿ ವಿರುದ್ಧ ಪ್ರತಿಭಟನೆ

ಬೀದಿ ಬದಿ ವ್ಯಾಪಾರಿಗಳ ಹಠಾತ್‌ ತೆರವು: ಬಿಬಿಎಂಪಿ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವಿನ ಜಟಾಪಟಿ ಮತ್ತೆ ಭುಗಿಲೆದ್ದಿದ್ದು, ಜಯನಗರದ 4ನೇ ಬ್ಲಾಕ್‌ನಲ್ಲಿ  ಬೀದಿ ಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಹಠಾತ್ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ವಾಕ್ಸಸಮರ ನಡೆದಿದ್ದು, ಬಲವಂತವಾಗಿ ಅಧಿಕಾರಿಗಳು ವ್ಯಾಪಾರಿಗಳನ್ನು ತೆರವು ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಬಿಬಿಎಂಪಿ ಅಧಿಕಾರಿಗಳು ಯಾವುದೇ ನೊಟೀಸ್‌ ನೀಡದೆ ಮಾರ್ಷಲ್‌ಗಳನ್ನು ಬಳಸಿಕೊಂಡು 30-40 ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಮ್ಮನ್ನು ಬಲವಂತವಾಗಿ ತೆರವು ಮಾಡುತ್ತಿದ್ದಾರೆ ಎಂದು ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಬೀದಿ ಬದಿ ವ್ಯಾಪಾರ ಮಾಡಲು ಅನುಮತಿ ನೀಡಿ ಬಿಬಿಎಂಪಿ ಕೊಟ್ಟಿರುವ ಪತ್ರ ನಮ್ಮಲ್ಲಿದೆ. ಬೀದಿ ಬದಿ ವ್ಯಾಪಾರಕ್ಕೆ ಸರ್ಕಾರ ನಮಗೆ ಲೋನ್ ಕೂಡ ಕೊಡುತ್ತಿದೆ. ಆದರೂ ಬಿಬಿಎಂಪಿಯವರು ನಮಗೆ ತೊಂದರೆ ಕೊಡುತ್ತಿದ್ದಾರೆ. ಮಾರ್ಷಲ್‌ಗಳನ್ನು ಬಳಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಬಿಬಿಎಂಪಿ ನಿಗದಿ ಮಾಡಿದ ಸ್ಥಳಗಳಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಆದರೂ ಸುಖಾ ಸುಮ್ಮನೆ ಫುಟ್ ಪಾತ್ ಒತ್ತುವರಿ ಆರೋಪ ಹೊರಿಸಿ ನಮ್ಮ ತಳ್ಳು ಗಾಡಿಗಳನ್ನು ಹೊತ್ತೊಯ್ದಿದ್ದಾರೆ. ಯಾವುದೇ ಮುನ್ಸೂಚಣೆ ನೀಡದೆ ತೆರವು ಕಾರ್ಯಾಚರಣೆ ಮಾಡಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಕೀಲರಾದ ವಿನಯ್‌ ಶ್ರೀನಿವಾಸ್‌ ನಾನು ಗೌರಿ.ಕಾಂ ಜೊತೆ ಮಾತನಾಡಿದ್ದು, ಬಿಬಿಎಂಪಿ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ವ್ಯಾಪಾರ ಮಾಡಲಿಕ್ಕೆ ಬಿಡುತ್ತಿಲ್ಲ. ಬೀದಿ ವ್ಯಾಪಾರಿಗಳು ಎಂದರೆ ಮೂವಿಂಗ್‌ ಇರಬೇಕು ಎಂದು ಹೇಳುತ್ತಾರೆ. ಕಾನೂನಿನಲ್ಲಿ ಬೀದಿ ವ್ಯಾಪಾರಿಗಳು ಒಂದೆಡೆ ಕುಳಿತು ವ್ಯಾಪಾರ ಮಾಡವುದಕ್ಕೆ ಅವಕಾಶ ಇದೆ. ಆದರೆ ಅವರು ಕಿರುಕುಳ ಕೊಡುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿಯ ಕಮಿಷನರ್‌ಗಳ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ವ್ಯಾಪಾರ ಮಾಡುವುದು ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡುತ್ತಿದ್ದೇವೆ. 192 ಸದಸ್ಯರು ಅದೀಕೃತವಾಗಿ ಲೈಸನ್ಸ್‌ ಪಡೆದವರು. ನಾವು ಅವರಿಗೆ ವ್ಯಾಪಾರದ ಜಾಗವನ್ನು ತೋರಿಸಿದ್ದೇವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡುತ್ತಿದ್ದೇವೆ. ಈಗ ನೊಟೀಸ್‌ ಇಲ್ಲದೆ ತೆರವಿಗೆ ಮುಂದಾಗಿದ್ದಾರೆ. ನೊಟೀಸ್‌ ಕೇಳಿದ್ರು ಕೊಡಲಿಲ್ಲ. ಬೀದಿ ವ್ಯಾಪಾರಿಗಳ ಕಾನೂನುಗಳ ಎಲ್ಲಾ ಸೆಕ್ಸನ್‌ಗಳನ್ನು ಅವರು ಉಲ್ಲಂಘನೆ ಮಾಡಿದ್ದಾರೆ. ಯಾಕೆ ವ್ಯಾಪಾರ ಇಲ್ಲಿ ಮಾಡಬಾರದು ಎಂದು ಹೇಳುವುದಿಲ್ಲ. ಯಾವುದೇ ಆದೇಶ, ನೊಟೀಸ್‌ ಇಲ್ಲದೆ ತೆರವು ಮಾಡುತ್ತಿದ್ದಾರೆ. ಬಿಬಿಎಂಪಿ ಕಾನೂನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...