Homeಕರ್ನಾಟಕಬೀದಿ ಬದಿ ವ್ಯಾಪಾರಿಗಳ ಹಠಾತ್‌ ತೆರವು: ಬಿಬಿಎಂಪಿ ವಿರುದ್ಧ ಪ್ರತಿಭಟನೆ

ಬೀದಿ ಬದಿ ವ್ಯಾಪಾರಿಗಳ ಹಠಾತ್‌ ತೆರವು: ಬಿಬಿಎಂಪಿ ವಿರುದ್ಧ ಪ್ರತಿಭಟನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವಿನ ಜಟಾಪಟಿ ಮತ್ತೆ ಭುಗಿಲೆದ್ದಿದ್ದು, ಜಯನಗರದ 4ನೇ ಬ್ಲಾಕ್‌ನಲ್ಲಿ  ಬೀದಿ ಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಹಠಾತ್ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ವಾಕ್ಸಸಮರ ನಡೆದಿದ್ದು, ಬಲವಂತವಾಗಿ ಅಧಿಕಾರಿಗಳು ವ್ಯಾಪಾರಿಗಳನ್ನು ತೆರವು ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಬಿಬಿಎಂಪಿ ಅಧಿಕಾರಿಗಳು ಯಾವುದೇ ನೊಟೀಸ್‌ ನೀಡದೆ ಮಾರ್ಷಲ್‌ಗಳನ್ನು ಬಳಸಿಕೊಂಡು 30-40 ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಮ್ಮನ್ನು ಬಲವಂತವಾಗಿ ತೆರವು ಮಾಡುತ್ತಿದ್ದಾರೆ ಎಂದು ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಬೀದಿ ಬದಿ ವ್ಯಾಪಾರ ಮಾಡಲು ಅನುಮತಿ ನೀಡಿ ಬಿಬಿಎಂಪಿ ಕೊಟ್ಟಿರುವ ಪತ್ರ ನಮ್ಮಲ್ಲಿದೆ. ಬೀದಿ ಬದಿ ವ್ಯಾಪಾರಕ್ಕೆ ಸರ್ಕಾರ ನಮಗೆ ಲೋನ್ ಕೂಡ ಕೊಡುತ್ತಿದೆ. ಆದರೂ ಬಿಬಿಎಂಪಿಯವರು ನಮಗೆ ತೊಂದರೆ ಕೊಡುತ್ತಿದ್ದಾರೆ. ಮಾರ್ಷಲ್‌ಗಳನ್ನು ಬಳಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಬಿಬಿಎಂಪಿ ನಿಗದಿ ಮಾಡಿದ ಸ್ಥಳಗಳಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಆದರೂ ಸುಖಾ ಸುಮ್ಮನೆ ಫುಟ್ ಪಾತ್ ಒತ್ತುವರಿ ಆರೋಪ ಹೊರಿಸಿ ನಮ್ಮ ತಳ್ಳು ಗಾಡಿಗಳನ್ನು ಹೊತ್ತೊಯ್ದಿದ್ದಾರೆ. ಯಾವುದೇ ಮುನ್ಸೂಚಣೆ ನೀಡದೆ ತೆರವು ಕಾರ್ಯಾಚರಣೆ ಮಾಡಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಕೀಲರಾದ ವಿನಯ್‌ ಶ್ರೀನಿವಾಸ್‌ ನಾನು ಗೌರಿ.ಕಾಂ ಜೊತೆ ಮಾತನಾಡಿದ್ದು, ಬಿಬಿಎಂಪಿ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ವ್ಯಾಪಾರ ಮಾಡಲಿಕ್ಕೆ ಬಿಡುತ್ತಿಲ್ಲ. ಬೀದಿ ವ್ಯಾಪಾರಿಗಳು ಎಂದರೆ ಮೂವಿಂಗ್‌ ಇರಬೇಕು ಎಂದು ಹೇಳುತ್ತಾರೆ. ಕಾನೂನಿನಲ್ಲಿ ಬೀದಿ ವ್ಯಾಪಾರಿಗಳು ಒಂದೆಡೆ ಕುಳಿತು ವ್ಯಾಪಾರ ಮಾಡವುದಕ್ಕೆ ಅವಕಾಶ ಇದೆ. ಆದರೆ ಅವರು ಕಿರುಕುಳ ಕೊಡುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿಯ ಕಮಿಷನರ್‌ಗಳ ಗಮನಕ್ಕೆ ತಂದಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ವ್ಯಾಪಾರ ಮಾಡುವುದು ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡುತ್ತಿದ್ದೇವೆ. 192 ಸದಸ್ಯರು ಅದೀಕೃತವಾಗಿ ಲೈಸನ್ಸ್‌ ಪಡೆದವರು. ನಾವು ಅವರಿಗೆ ವ್ಯಾಪಾರದ ಜಾಗವನ್ನು ತೋರಿಸಿದ್ದೇವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡುತ್ತಿದ್ದೇವೆ. ಈಗ ನೊಟೀಸ್‌ ಇಲ್ಲದೆ ತೆರವಿಗೆ ಮುಂದಾಗಿದ್ದಾರೆ. ನೊಟೀಸ್‌ ಕೇಳಿದ್ರು ಕೊಡಲಿಲ್ಲ. ಬೀದಿ ವ್ಯಾಪಾರಿಗಳ ಕಾನೂನುಗಳ ಎಲ್ಲಾ ಸೆಕ್ಸನ್‌ಗಳನ್ನು ಅವರು ಉಲ್ಲಂಘನೆ ಮಾಡಿದ್ದಾರೆ. ಯಾಕೆ ವ್ಯಾಪಾರ ಇಲ್ಲಿ ಮಾಡಬಾರದು ಎಂದು ಹೇಳುವುದಿಲ್ಲ. ಯಾವುದೇ ಆದೇಶ, ನೊಟೀಸ್‌ ಇಲ್ಲದೆ ತೆರವು ಮಾಡುತ್ತಿದ್ದಾರೆ. ಬಿಬಿಎಂಪಿ ಕಾನೂನು ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...