Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...