Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...