Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...