Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...