Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...