Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...