Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...