Homeಕರ್ನಾಟಕಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

ಮಾರುಕಟ್ಟೆ, ರೆಸ್ಟೋರೆಂಟ್, ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲಿರುವ ಬಿಬಿಎಂಪಿ!

- Advertisement -
- Advertisement -

ಲಕ್ಷಣರಹಿತ ಕೊರೊನಾ ಸೋಂಕಿತರ ಮೂಲಕ ವೈರಸ್‌ ಹರಡುವಿಕೆಯು ಭಾರಿ ಸಮಸ್ಯೆಯಾಗಿದ್ದು, ಇದನ್ನು ಪತ್ತೆ ಹಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಮಾರುಕಟ್ಟೆ,‌ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸೂಪರ್‌ಮಾರ್ಕೆಟ್‌ಗಳು ಹಾಗೂ ವೈದ್ಯಕೀಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರನ್ನು ಪರೀಕ್ಷಿಸಲು ಯೋಜನೆ ತಯಾರಿಸಿದೆ.

ಭಾರತದ ಇತರ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದ್ದು ಹಾಗೂ ಬಿಬಿಎಂಪಿ ಅದನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ.

ಬೆಂಂಗಳೂರಿನಲ್ಲಿ ಪ್ರಸ್ತುತ 690 ಜನರಗೆ ಕೊರೊನಾ ಸೋಂಕು ಇರುವುದು ವರದಿಯಾಗಿದೆ.

ರೋಗ ಲಕ್ಷಣಗಳು ಇಲ್ಲದ ರೋಗಿಗಳ ಮೂಲಕ ವೈರಸ್ ಸದ್ದಿಲ್ಲದೆ ಹರಡುವ ಅಪಾಯವಿದ್ದು, ದೇಶದ ಹಲವಾರು ನಗರದಲ್ಲಿ ಇದೇ ಸಮಸ್ಯೆ ಕಾಡುತ್ತಿದೆ. ಇಂತಹ ಕ್ಲಸ್ಟರ್‌ಗಳನ್ನು ಪತ್ತೆಹಚ್ಚಲು ಬಿಬಿಎಂಪಿ ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಎಂಬ ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದೆ.

ಜನನಿಬಿಡ ಸ್ಥಳಗಳಿಂದ ಮಾದರಿಗಳನ್ನು ಜನರ ಮನೆಗಳಿಂದ ತೆಗೆದ ಮಾದರಿಗಳೊಂದಿಗೆ ಸಂಯೋಜಿಸಲು ಅಧಿಕಾರಿಗಳು ಯೋಜಿಸಿದ್ದಾರೆ.

ಬಿಬಿಎಂಪಿ ತಮ್ಮ ದತ್ತಾಂಶ ವಿಶ್ಲೇಷಣಾ ತಂಡದೊಂದಿಗೆ ಈ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಕೈಜೋಡಿಸಿದ್ದಾರೆ.

ಈ ವಿಧಾನದಲ್ಲಿ ಲಕ್ಷಣ ರಹಿತ ರೋಗಿಗಳನ್ನು ತ್ವರಿತವಾಗಿ ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಬಿಬಿಎಂಪಿಯ ಕೊರೊನಾ ವಾರ್ ರೂಮ್ ವಿಶೇಷ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.

ಸಂಪರ್ಕದ ಪತ್ತೆಹಚ್ಚುವಿಕೆಯೂ ಸಕಾರಾತ್ಮಕ ರೋಗಿಯ ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆಹಚ್ಚುವುದು ಮತ್ತು ಪ್ರತ್ಯೇಕಿಸುವುದರ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅಧಿಕಾರಿಗಳು ‘ಆಂಟಿ-ಕಾಂಟ್ಯಾಕ್ಟ್ ಟ್ರೇಸಿಂಗ್’ ಹೊಸ ಕ್ಲಸ್ಟರ್ ಗಳನ್ನು ಪತ್ತೆ ಹಚ್ಚುವುದನ್ನು ಒಳಗೊಂಡಿರುವುದರಿಂದ ಹೆಚ್ಚಿನ ಪರಿಶೋಧನಾ ಪರೀಕ್ಷೆಯ ಅಗತ್ಯವಿದೆ ಎಂದು ಹೇಳುತ್ತಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಹಾಗೂ ದೊಡ್ಡ ಸಂಖ್ಯೆಯಲ್ಲಿ ಜನ ಓಡಾಟವಿರುವ ಸ್ಥಳಗಳ ಮೇಲೆ ಹೆಚ್ಚಿನ ಗಮನ ಇರುತ್ತದೆ ಎಂದು ಹೇಳಿದ್ದಾರೆ.

“ನಾವು ಸೋಂಕಿಗೆ ಒಳಗಾಗುವ ಹೆಚ್ಚಿನ ಸಂಭವನೀಯತೆ ಇರುವ ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾದೃಚ್ಚಿಕ ಪರೀಕ್ಷೆಯನ್ನು ಮಾಡುತ್ತೇವೆ. ಸಮುದಾಯ ಹರಡುವಿಕೆ ಇದೆಯೇ ಎಂದು ನೋಡಲು ನಾವು ಇದನ್ನು ಮಾಡುತ್ತೇವೆ. ಕೊರೊನಾ ಪಾಸಿಟಿವ್ ಆಗಿರುವ ಜನರನ್ನು ಸ್ಥಳಾಂತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ಹೆಚ್ಚಿನ ಜನ ಓಡಾಟ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡುವ ಜನರಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಹೊಸ ಹಾಟ್‌ಸ್ಪಾಟ್‌ಗಳು ಅಥವಾ ಕ್ಲಸ್ಟರ್‌ಗಳನ್ನು ಗುರುತಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎಂದು ಅನಿಲ್ ಕುಮಾರ್ ಹೇಳಿದ್ದಾರೆ.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...