Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...