Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...