Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...