Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...