Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...