Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...