Homeಮುಖಪುಟಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! - ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

ಕಿರಿಯ ಶಾಲೆಯಲ್ಲಿ ‘ಬಿಸಿಎ’ ಪದವಿ! – ಅಮಿತ್ ಷಾ ಸಹಾಯಕ ಸಚಿವನ ಶೈಕ್ಷಣಿಕ ಅರ್ಹತೆ ವಿವಾದ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ಹೊಸದಾಗಿ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿರುವ ನಿಸಿತ್ ಪ್ರಮಾಣಿಕ್ ಅವರ ನಿಜವಾದ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳೆದ್ದಿವೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಲೋಕಸಭಾ ಸಂಸದರಾಗಿರುವ ಅವರು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಮತ್ತು ಸಂಸತ್ತಿನ ಮುಂದೆ ವಿರೋಧಾತ್ಮಕ ಮಾಹಿತಿಯನ್ನು ನೀಡಿದ್ದಾರೆ.

ಬುಧವಾರ ನಡೆದ ಸಂಪುಟ ಪುನರ್ರಚನೆಯ ನಂತರ ನಿಸಿತ್ ಪ್ರಮಾಣಿಕ್ ಅವರನ್ನು ಗೃಹ ಸಚಿವ ಅಮಿತ್ ಶಾ ಅವರ ಹೊಸ ಸಹಾಯಕ ಸಚಿವ ಎಂದು ಹೆಸರಿಸಿದ ನಂತರ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವಾದಗಳು ಭುಗಿಲೆದ್ದಿವೆ.

ಇತ್ತೀಚೆಗೆ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೂ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಬೇಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 35 ವರ್ಷದ ನಿಸಿತ್ ಪ್ರಮಾಣಿಕ್, ತನ್ನ ಶೈಕ್ಷಣಿಕ ಅರ್ಹತೆ “ಮಾಧ್ಯಮಿಕ್ ಪರಿಕ್ಷಾ” ಅಥವಾ ಅಥವಾ “ಸೆಕೆಂಡರಿ ಪರೀಕ್ಷೆ” ಎಂದು ಎರಡೂ ಅಫಿಡೆವಿಟ್‌‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಒಂದು ಅಫಿಡೆವಿಟ್‌ ಅನ್ನು ಮಾರ್ಚ್ 25, 2019 ರ ಲೋಕಸಭಾ ಚುನಾವಣೆಯಲ್ಲಿ ಸಲ್ಲಿಸಲಾಗಿದ್ದು, ಮತ್ತೊಂದು ಅಫಿಡವಿಟ್‌ ಅನ್ನು ಈ ವರ್ಷದ ಮಾರ್ಚ್‌ 18 ರ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದೆ.

ನಿಸಿತ್ ಪ್ರಮಾಣಿಕ್ ಅವರ ಮಾರ್ಚ್ 2021 ರ ಅಫಿಡವಿಟ್.

ಆದಾಗ್ಯೂ, ಲೋಕಸಭಾ ವೆಬ್‌ಸೈಟ್‌ನಲ್ಲಿ ಪ್ರಮಾಣಿಕ್ ಅವರ ಪ್ರೊಫೈಲ್‌ನಲ್ಲಿ ಅವರ ಶೈಕ್ಷಣಿಕ ಅರ್ಹತೆ “ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ (ಬಿ.ಸಿ.ಎ.) ಬಾಲಕುರಾ ಜೂನಿಯರ್ ಬೇಸಿಕ್ ಶಾಲೆಯಲ್ಲಿ  ಶಿಕ್ಷಣ ಪಡೆದಿದ್ದಾರೆ” ಎಂದು ಹೇಳುತ್ತದೆ.

ಲೋಕಸಭಾ ವೆಬ್‌ಸೈಟ್‌ನಲ್ಲಿ ನಿಸಿತ್ ಪ್ರಮಾಣಿಕ್ ಅವರ ಪ್ರೊಫೈಲ್.

ಬಿಸಿಎ ಮೂರು ವರ್ಷಗಳ ಪದವಿ ಕೋರ್ಸ್ ಆಗಿದ್ದು, ಇದಕ್ಕಾಗಿ ಹೈಯರ್ ಸೆಕೆಂಡರಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ಕೂಚ್‌ ಬೆಹಾರ್‌ ಜಿಲ್ಲೆಯ ಹಲವಾರು ಟಿಎಂಸಿ ನಾಯಕರು ಈ ವ್ಯತ್ಯಾಸಗಳನ್ನು ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

“ಮಾರ್ಚ್‌ನಲ್ಲಿ, ನಿಸಿತ್ ಪ್ರಮಾಣಿಕ್ ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಸೆಕೆಂಡರಿ ಪರೀಕ್ಷೆ ಎಂದು ಉಲ್ಲೇಖಿಸಿದ್ದಾರೆ. ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಯೆ ಎಂದು ತಮ್ಮ ಅಫಿಡವಿಟ್‌‌ನಲ್ಲಿ ಸ್ಪಷ್ಟಪಡಿಸಲಿಲ್ಲ. ಈಗ, ಜುಲೈನಲ್ಲಿ, ಅವರು ಪದವಿ ಪದವಿ ಪಡೆದಿದ್ದಾರೆ ಎಂದು ಪ್ರೋಫೈಲ್ ಹೇಳಿದೆ. ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಒಬ್ಬರು ಪದವಿ ಹೇಗೆ ಪಡೆಯಲು ಸಾಧ್ಯ?” ಎಂದು ಮಾಜಿ ಟಿಎಂಸಿ ಶಾಸಕ ಉದಯನ್ ಗುಹಾ ಅವರನ್ನು ಕೇಳಿದ್ದಾರೆ.

ಟಿಎಂಸಿಯ ಕೂಚ್ ಬೆಹರ್‌ನ ಮಾಜಿ ಸಂಸದ ಪಾರ್ಥ ಪ್ರತಿಮ್ ರಾಯ್ ಅವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಪ್ರಮಾಣಿಕ್ ಅವರ ವಿಭಿನ್ನ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.

ಇದರ ಜೊತೆಗೆ ನಿಶಿತ್‌ ಪ್ರಮಾಣಿಕ್ ಅವರ ಲೋಕಸಭಾ ಪ್ರೊಫೈಲ್ ಉಲ್ಲೇಖಿಸುವ ಶಾಲೆಯು ಕಿರಿಯ ಶಾಲೆಯಾಗಿದ್ದು, ಅಲ್ಲಿ ಅಂತಹ ಯಾವುದೇ ಕೋರ್ಸ್‌ ಇಲ್ಲ ಉದಯನ್‌ ಎಂದು ಗುಹಾ ಆರೋಪಿಸಿದ್ದಾರೆ. “ಈ ಶಾಲೆಯು 5 ನೇ ತರಗತಿವರೆಗೆ ಮಾತ್ರ ಇರುವ ಕಿರಿಯ ಶಾಲೆಯಾಗಿದೆ. ಇದು ಪದವಿಯನ್ನು ನೀಡಲು ಹೇಗೆ ಸಾಧ್ಯ?” ಎಂದು ಅವರು ಹೇಳಿದ್ದಾರೆ.

ಈ ಶಾಲೆಯು ಸಂಸದರ ನಿವಾಸದಿಂದ ಸುಮಾರು 8 ಕಿ.ಮೀ ದೂರದಲ್ಲಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ದಿವೈರ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

ಆದಾಗ್ಯೂ, ಪ್ರಮಾಣಿಕ್ ಅವರ ಸಂಸತ್‌‌ನ ಪ್ರೊಫೈಲ್, ಶಾಲೆಯು ಅವರಿಗೆ ಪದವಿ ನೀಡಿತು ಎಂದು ಉಲ್ಲೇಖಿಸಿಲ್ಲ. ಬಾಲಕುರ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ ಎಂದು ಎಂದು ಅದು ಹೇಳಿದೆ. ಆದರೆ ಅವರಿಗೆ ಯಾವ ಸಂಸ್ಥೆ ಬಿಸಿಎ ಪದವಿಯನ್ನು ನೀಡಿತು ಎಂಬುದನ್ನು ಸಹ ಪ್ರೊಫೈಲ್ ಉಲ್ಲೇಖಿಸಿಲ್ಲ.

ನಿಸಿತ್‌ ಪ್ರಮಾಣಿಕ್ ಅವರು ಕೂಚ್ ಬೆಹಾರ್ ಜಿಲ್ಲೆಯ ಟಿಎಂಸಿ ಯುವ ವಿಭಾಗದ ನಾಯಕರಾಗಿದ್ದು, 2018 ರಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು, ನಂತರ ಅವರು 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಬಿಜೆಪಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಅವರು ವಿಧಾನಸಭೆಗೂ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಗೆದ್ದಿದ್ದರು. ಆದರೆ ಅವರು ತಮ್ಮ ಸಂಸದ ಸ್ಥಾನವನ್ನು ಉಳಿಸಲು ಬೇಕಾಗಿ ಅದಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಸಿತ್‌ ಪ್ರಮಾಣಿಕ್‌‌ 2019 ರ ಅಫಿಡವಿಟ್‌ನಲ್ಲಿ ತನ್ನ ವಿರುದ್ದ 11 ಕ್ರಿಮಿನಲ್ ಪ್ರಕರಣಗಳನ್ನು ಮತ್ತು 2021 ರ ಅಫಿಡವಿಟ್‌ನಲ್ಲಿ 13 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಇದರಲ್ಲಿ ಕೊಲೆ, ದೌರ್ಜನ್ಯ, ಕಳ್ಳತನ ಮತ್ತು ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳು ಸೇರಿವೆ.

ಕೃಪೆ: ದಿವೈರ್‌

ಇದನ್ನೂ ಓದಿ: ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...