Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...