Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...