Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...