Homeಸಿನಿಮಾಕ್ರೀಡೆಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

ಬಿಸಿಸಿಐ ಅಧ್ಯಕ್ಷಗಿರಿ ಹೈಡ್ರಾಮಾ: ಗಂಗೂಲಿ ಅಮಿತ್ ಶಾರನ್ನು ಭೇಟಿಯಾಗಿದ್ದೇಕೆ?

- Advertisement -
- Advertisement -

ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಬಿಸಿಸಿಐಗೆ ಅಧ್ಯಕ್ಷರಾಗಿ ಆಯ್ಕೆಯೇನೊ ಆಗಿದ್ದಾರೆ. ಆದರೆ ಆ ಆಯ್ಕೆಯ ಹಿಂದೆ ತಡರಾತ್ರಿವರೆಗೆ ನಡೆದ ವಿದ್ಯಮಾನಗಳು ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಅಕ್ಟೋಬರ್ 14ರ ರಾತ್ರಿ ಸುಮಾರು 10.30ರವರೆಗೆ ಬಿಸಿಬಿಸಿ ಚರ್ಚೆಗಳು ನಡೆದ ನಂತರವೇ ಗಂಗೂಲಿ ಮತ್ತು ಬ್ರಿಜೇಶ್ ಪಟೇಲ್ ನಡುವಿನ ಉಮೇದುವಾರಿಕೆ ಇತ್ಯರ್ಥಕ್ಕೆ ಬಂದು ದಾದಾ ಬಿಸಿಸಿಐ ಅಧ್ಯಕ್ಷರೆಂದು ಆಯ್ಕೆಯಾಯ್ತು. ಆದರೆ ಅವತ್ತು ಸಂಜೆಯವರೆಗೂ ಅಧ್ಯಕ್ಷಗಿರಿಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದದ್ದು ಕರ್ನಾಟಕದ ಬ್ರಿಜೇಶ್ ಪಟೇಲ್ ಹೆಸರು. ಯಾಕೆಂದರೆ ಬ್ರಿಜೇಶ್ ಪಟೇಲ್ ಗೆ ಬೆನ್ನೆಲುಬಾಗಿ ನಿಂತದ್ದು ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್. ಇವತ್ತಿಗೂ ಇಂಡಿಯಾ ಕ್ರಿಕೆಟ್ ಅಡ್ಮಿನಿಸ್ಟ್ರೇಷನ್ ಮೇಲೆ ಶ್ರೀನಿವಾಸನ್ ಅವರಿಗೆ ಬಿಗಿ ಹಿಡಿತವಿದೆ. ಹಾಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪೂರ್ವ ಭಾರತದ ಹಲವು ರಾಜ್ಯಗಳ ಕ್ರಿಕೆಟ್ ಅಸೋಸಿಯೇಷನ್ ಗಳು ಬ್ರಿಜೇಶ್ ಪಟೇಲ್ ಗೆ ಬೆಂಬಲ ಸೂಚಿಸಿದ್ದವು.

ಸ್ವತಃ ಗಂಗೂಲಿಗೇ ತಾನು ಆಯ್ಕೆಯಾಗುವ ವಿಶ್ವಾಸ ಇರಲಿಲ್ಲ ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.”ರಾತ್ರಿ ಹತ್ತೂವರೆಗೆ ನನಗೆ ಫೋನ್ ಮಾಡಿ ಹೇಳಿದಾಗ ನಂಬಲೇ ಆಗಲಿಲ್ಲ. ಅಲ್ಲಿವರೆಗೂ ನಾನು ಚೇರ್ಮನ್ ಆಗ್ತೀನಿ ಅನ್ನೋ ವಿಶ್ವಾಸ ಇರಲಿಲ್ಲ” ಎಂಬ ಗಂಗೂಲಿಯ ಮಾತುಗಳು ಇಡೀ ಆಯ್ಕೆಯನ್ನು ಅನುಮಾನಿಸುವಂತೆ ಮಾಡುತ್ತವೆ. ಹಾಗಿದ್ದರೆ ಕೊನೇ ಕ್ಷಣದಲ್ಲಿ ಇಡೀ ಸಿನೇರಿಯಾವನ್ನೇ ಬದಲಾಯಿಸಿದ್ದು ಯಾರು? ಯಾವ ಲಾಭಕ್ಕಾಗಿ? ಇದರ ಹಿಂದೆ ಏನಾದರು ರಾಜಕೀಯ ಲೆಕ್ಕಾಚಾರಗಳಿವೆಯೇ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವಾಗಿ ನಿಲ್ಲೋದು ಕೇಂದ್ರ ಸಚಿವ ಅನುರಾಗ್ ಠಾಕೂರ್!

ಮೋದಿಯವರ ಸಂಪುಟದಲ್ಲಿ ಹಣಕಾಸು ರಾಜ್ಯ ಖಾತೆ ಸಚಿವರಾಗಿರುವ ಅನುರಾಗ್ ಠಾಕೂರ್ ಈ ಹಿಂದೆ ಇದೇ ಬಿಸಿಸಿಐನ ಅಧ್ಯಕ್ಷರಾಗಿದ್ದಂತವರು. ಹಾಗಾಗಿ ಅವತ್ತು ನಡೆದ ಸಭೆಗೆ ಹೋಗುವ ಹಕ್ಕು, ಅರ್ಹತೆಗಳು ಅವರಿಗಿದ್ದವು. ಅವರು ಸಭೆಗೆ ಬಂದ ನಂತರವೇ ಇಡೀ ವಾತಾವರಣ ತಲೆಕೆಳಗಾಯಿತು ಎನ್ನುತ್ತಿವೆ ಮೂಲಗಳು. ಮೇಲಿನಿಂದ ಆದೇಶವನ್ನು ಹೊತ್ತು ತಂದಂತಿದ್ದ ಅವರ ದೃಢ ನಿಲುವು ಗಂಗೂಲಿ ಪರ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜೇಶ್ ಪಟೇಲ್ ಪರವಾಗಿ ನಿಂತಿದ್ದವರು ಒಬ್ಬೊಬ್ಬರಾಗಿ ಗಂಗೂಲಿ ಬೆನ್ನ ಹಿಂದಕ್ಕೆ ಸರಿದುಕೊಂಡಿದ್ದರು. ಸ್ವತಃ ಶ್ರೀನಿವಾಸನ್ ಅಸಹಾಯಕರಾಗಬೇಕಾಗಿ ಬಂತು ಎನ್ನುತ್ತಾರೆ ಸಭೆಯಲ್ಲಿ ಭಾಗಿಯಾಗಿದ್ದವರೊಬ್ಬರು. ಅಲ್ಲಿಂದಾಚೆಗೆ ಶ್ರೀನಿವಾಸನ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಮುಖಕ್ಕೆ ಮುಖ ಕೊಟ್ಟು ಮಾತಾಡಲಿಲ್ಲವಾದರು ಗಂಗೂಲಿ ಅವಿರೋಧ ಆಯ್ಕೆಗೆ ಸಮ್ಮತಿ ಸೂಚಿಸಿದರು ಎನ್ನುವ ಮೂಲಗಳು, ಒಂದು ಹಂತದಲ್ಲಿ ಏಕಪಕ್ಷೀಯ ತೀರ್ಪು ನೀಡುವಂತೆ “ಗಂಗೂಲಿ ಬಿಸಿಸಿಐ ಪ್ರೆಸಿಡೆಂಟ್ ಆಗಲು ಸಹಕಾರ ಕೊಡಿ, ಅದಕ್ಕೆ ಬದಲಾಗಿ ನೀವು (ಬ್ರಿಜೇಶ್ ರತ್ತ ಬೆರಳು ತೋರಿ) ಐಪಿಎಲ್ ಚೇರ್ಮನ್ ಆಗಿ” ಎಂಬ ಸಂಧಾನ ಸೂತ್ರವನ್ನು ಮುಂದಿಟ್ಟಾಗ ಎಲ್ಲರೂ ಒಪ್ಪಿಕೊಳ್ಳಬೇಕಾಯ್ತು ಎಂಬುದನ್ನೂ ಬಯಲುಗೊಳಿಸಿವೆ.

ಅನುರಾಗ್ ಠಾಕೂರ್ ವಿರುದ್ಧ ಸಿಡಿದೇಳಬಹುದಾದ ಎಲ್ಲಾ ಸಾಮರ್ಥ್ಯವೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮೂಲದ ಶ್ರೀನಿವಾಸನ್ ಅವರಿಗೆ ಇದ್ದವು. ಆದರೆ ಈ ಇಬ್ಬರೂ ಒಂದು ವಿಚಾರದಲ್ಲಿ ಸಮಾನ ಮನಸ್ಕರೂ ಹೌದು. ಬಿಸಿಸಿಐನಲ್ಲಿ ಹಣದ ಹರಿದಾಟ ಹೆಚ್ಚಾದಂತೆ ಭ್ರಷ್ಟಾಚಾರವೂ ಮಿತಿ ಮೀರಿತ್ತು. ಐಪಿಎಲ್ ಕಾಲಿಟ್ಟ ನಂತರವಂತೂ ಹಣದ ಹೊಳೆಯೇ ಹರಿದಾಡಲು ಶುರುವಾಗಿತ್ತು. ಆಗ ಮಧ್ಯಪ್ರವೇಶಿಸಿದ್ದ ಸುಪ್ರೀಂ ಕೋರ್ಟ್ 2017ರಲ್ಲಿ ನಾಲ್ಕು ಜನರ ಕಮಿಟಿ ಆಫ್ ಅಡ್ಮಿನಿಸ್ಟ್ರೇಟರ್'  ಅನ್ನು ರಚಿಸಿ, ಅವರ ನಿಗಾವಣೆಯಲ್ಲೆ ಆಡಳಿತ ನಡೆಸಬೇಕು, ಮುಖ್ಯವಾಗಿ ಲೋಧಾ ಸಮಿತಿಯ ಶಿಫಾರಸ್ಸುಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದಿತ್ತು. ಮಾಜಿ ಮಹಾ ಲೇಖಪಾಲಕರಾದ ವಿನೋದ್ ರೈ ನೇತೃತ್ವದ ಸಮಿತಿಗೆ ರಾಮಚಂದ್ರ ಗುಹಾ, ವಿಕ್ರಂ ಲಿಮಾಯೆ ಮತ್ತು ಡಯಾನಾ ಎಡುಲ್ಜಿಯವರನ್ನು ಸದಸ್ಯರನ್ನಾಗಿ ನ್ಯಾಯಾಲಯವೇ ನೇಮಕ ಮಾಡಿತ್ತು. ಆ ಸಮಿತಿ ಬಂದ ನಂತರ ಬಿಸಿಸಿಐನ ಘಟಾನುಘಟಿಗಳ ಕೈಕಟ್ಟಿ ಹಾಕಿದಂತಾಗಿತ್ತು. ಸಾಕಷ್ಟು `ಬಿಸಿಸಿಐ ಬಿಗ್ ಹ್ಯಾಂಡ್’ಗಳು ಈ ಸಮಿತಿ ತೊಲಗಿದರೆ ಸಾಕು ಎಂದು ಕನವರಿಸುತ್ತಿದ್ದಾರೆ. ಅಂತವರಲ್ಲಿ ಠಾಕೂರ್ ಮತ್ತು ಶ್ರೀನಿವಾಸ್ ಕೂಡಾ ಇದ್ದಾರೆ. ಸಮಿತಿಯೇ ನಿಜವಾದ ದುಶ್ಮನ್ ಆಗಿರುವಾಗ, ಅದರ ವಿರುದ್ಧ ಹೋರಾಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ನಮ್ಮನಮ್ಮಲ್ಲೆ ಮನಸ್ತಾಪವೇಕೆ ಎಂಬ ಸೂತ್ರದಡಿ ಶ್ರೀನಿವಾಸನ್ ಕೂಡಾ ಠಾಕೂರ್ ಗೆ ಎದುರಾಡದೆ ಕೊಟ್ಟು-ತೆಗೆದುಕೊಳ್ಳುವ ಆಫರ್ ಗೆ ಒಪ್ಪಿ ಕೊಂಡಿದ್ದಾರೆ.

ಅದೇನೊ ಸರಿ, ಆದ್ರೆ ಅನುರಾಗ್ ಠಾಕೂರ್ ಗಂಗೂಲಿ ಬರ ಬ್ಯಾಟಿಂಗ್ ಮಾಡಿದ್ದೇಕೆ? ಇದೇ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹಸಚಿವರ ಅಮಿತ್ ಶಾರ ಮಗ ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೂ ಇದಕ್ಕೂ ಏನಾದರು ನಂಟಿದೆಯಾ?

ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಆಯ್ಕೆ ಖಚಿತವಾಗುವುದಕ್ಕೂ ಹಿಂದಿನ ದಿನವಷ್ಟೇ ಮುಂಬೈ ನಗರಿಯಲ್ಲಿ ಅಮಿತ್ ಶಾ, ಗಂಗೂಲಿಯನ್ನು ಭೇಟಿಯಾಗಿ ಚರ್ಚಿಸಿದ್ದೇ ಈ ಎಲ್ಲಾ ಪ್ರಶ್ನೆಗಳು ಹುಟ್ಟಲು ಮೂಲ ಕಾರಣ. 2021ರಲ್ಲಿ ಎದುರಾಗಲಿರುವ ಗಂಗೂಲಿಯ ತವರು ರಾಜ್ಯ ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಮಣ್ಣು ಮುಕ್ಕಿಸಲು ಗಂಗೂಲಿಯನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಿದೆಯಾ? ಅದರ ಭಾಗವಾಗಿಯೇ ಬಿಸಿಸಿಐ ಅಧ್ಯಕ್ಷಗಿರಿಯನ್ನು ಗಂಗೂಲಿಗೆ ಕೊಟ್ಟು ಬಂಗಾಳಿಗರ ಮನಗೆಲ್ಲುವ ಜೊತೆಗೆ, ಬಿಜೆಪಿಯಿಂದ ಅವರನ್ನು ಕಣಕ್ಕಿಳಿಸಿ, ಸ್ಟಾರ್ ಪ್ರಚಾರಕರನ್ನಾಗೂ ಬಳಸುವ ಯೋಜನೆ ಶಾ ಭೇಟಿಯ ಹಿಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ ಈ ವಾದವನ್ನು ತಳ್ಳಿಹಾಕಿರುವ ಗಂಗೂಲಿ “ನಾನು ಅಮಿತ್ ಶಾರನ್ನು ಇದೇ ಮೊದಲ ಬಾರಿಗೆ ಭೇಟಿಯಾದದ್ದೇನೊ ನಿಜ. ಆದರೆ ಬಿಸಿಸಿಐ ಹುದ್ದೆಯ ಚರ್ಚೆಯೇ ಅಲ್ಲಿ ನಡೆಯಲಿಲ್ಲ. ನೀವು ಈ ಉಪಕಾರ ಮಾಡಿದ್ರ ನಾವು ಆ ಉಪಕಾರ ಮಾಡ್ತೀವಿ' ಅನ್ನೋ ಮಾತುಕತೆಯೇ ಅಲ್ಲಿ ನಡೆಯಲಿಲ್ಲ" ಎಂದಿದ್ದಾರೆ. ಅದೇನೆ ಆಗಲಿ ಬಿಸಿಸಿಐ ಅಧ್ಯಕ್ಷರಾಗಿರುವ ದಾದಾನ ಟೀಮಿನಲ್ಲಿ, ಶಾರ ಮಗ ಜಯ್ ಶಾ ಪ್ರಧಾನ ಪಾತ್ರ ವಹಿಸಲಿದ್ದಾರೆ.

`ಸರ್ವಂ ರಾಜಕೀಯಂ’ ಎನ್ನುವಂತಾಗಿರುವ ಇವತ್ತಿನ ಸಂದರ್ಭದಲ್ಲಿ ಬಿಸಿಸಿಐ ಅಂಗಳದಿಂದ ಎದ್ದು ಬರುತ್ತಿರುವ ಯಾವ ಸುದ್ದಿಯನ್ನೂ ತಳ್ಳಿಹಾಕಲಿಕ್ಕಾಗುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...