Homeಸಿನಿಮಾಕ್ರೀಡೆ'IPL T20' ಟೂರ್ನಿಗೆ 2 ಹೊಸ ತಂಡ ಸೇರ್ಪಡೆ: ಬಿಸಿಸಿಐ ಒಪ್ಪಿಗೆ

‘IPL T20’ ಟೂರ್ನಿಗೆ 2 ಹೊಸ ತಂಡ ಸೇರ್ಪಡೆ: ಬಿಸಿಸಿಐ ಒಪ್ಪಿಗೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಳಿಯ ಪದಾಧಿಕಾರಗಳು, ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳು, ಐಪಿಎಲ್ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

- Advertisement -
- Advertisement -

ಇಂಡಿಯನ್ ಪ್ರೀಮಿಯರ್ ಲೀಗ್ (IPL T20) ಕ್ರಿಕೆಟ್ ಟೂರ್ನಿಯಲ್ಲಿ ಎರಡು ಹೊಸ ತಂಡಗಳ ಸೇರ್ಪಡೆಗೆ ಗುರುವಾರ ಅನುಮತಿ ಸಿಕ್ಕಿದ್ದು, ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸರ್ವಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಗಾಗಿ IPL‌ನಲ್ಲಿ ಆಡುವ ತಂಡಗಳ ಸಂಖ್ಯೆಯು ಹತ್ತಕ್ಕೇರಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ರಾತ್ರಿ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ!

 

ಇದನ್ನೂ ಓದಿ: ರಾತ್ರಿ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ!

“ಮುಂಬರುವ IPL‌ನಲ್ಲಿಯೇ ಎರಡೂ ಹೊಸ ತಂಡಗಳನ್ನು ಸೇರ್ಪಡೆ ಮಾಡುವ ಯೋಚನೆಯಿತ್ತು. ಆದರೆ ಸಮಯ ಕಡಿಮೆ ಇರುವುದರಿಂದ ತರಾತುರಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವುದು ಸರಿಯಾಗುವುದಿಲ್ಲ ಎಂಬ ಕಾರಣಕ್ಕೆ 2022ರ ಐಪಿಎಲ್‌ನಲ್ಲಿ ಸೇರಿಸಲು ನಿರ್ಧರಿಸಲಾಯಿತು” ಎಂದು ಮೂಲಗಳು ತಿಳಿಸಿವೆ.

ಇದಿಷ್ಟೇ ಅಲ್ಲದೇ ಸಭೆಯಲ್ಲಿ ಇನ್ನಷ್ಟು ಪ್ರಮುಖ ಅಂಶಗಳ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮುಖ್ಯಾಂಶಗಳನ್ನು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ: ಆಪ್‌ ಮುಖಂಡ ರಾಘವ್ ಚಡ್ಡಾ ಕಛೇರಿಯ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ

“2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ T20 ಕ್ರಿಕೆಟ್‌ಗೆ ಬೆಂಬಲ, 2022ರ ಐಪಿಎಲ್‌ ಟೂರ್ನಿಯಲ್ಲಿ ತಂಡಗಳ ಸಂಖ್ಯೆಯನ್ನು ಹತ್ತಕ್ಕೇರಿಸಲು ಅನುಮೋದನೆ, ಜನವರಿಯಲ್ಲಿ ಸೈಯದ್ ಮುಷ್ತಾಕ್ ಅಲಿ T20 ಟೂರ್ನಿಯೊಂದಿಗೆ ದೇಶಿ ಕ್ರಿಕೆಟ್‌ಗೆ ಚಾಲನೆ, ಕೊರೊನಾ ಕಾರಣದಿಂದ ಆದಾಯ ನಷ್ಟವಾಗಿರುವ ಪುರುಷ ಮತ್ತು ಮಹಿಳಾ ದೇಶಿ ತಂಡಗಳ ಕ್ರಿಕೆಟಿಗರಿಗೆ ಪರಿಹಾರ, ಬಿಸಿಸಿಐ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ ಶುಕ್ಲಾ, ಐಸಿಸಿಯ ಮಂಡಳಿಯಲ್ಲಿ ಸೌರವ್ ಗಂಗೂಲಿ ನಿರ್ದೇಶಕರಾಗಿ ಮುಂದುವರಿಯಲು ಸಹಮತ, ಐಸಿಸಿ ಮುಖ್ಯ ಕಾರ್ಯನಿರ್ವಾಹಕರ ಸಮಿತಿ ಸಭೆಯಲ್ಲಿ ಪ್ರತಿನಿಧಿಯಾಗಿ ಕಾರ್ಯದರ್ಶಿ ಜಯ್ ಶಾ ಹೆಚ್ಚುವರಿ ನಿರ್ದೇಶಕರಾಗಿ ಮುಂದುವರಿಕೆ ಸೇರಿದಂತೆ ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಳಿಯ ಪದಾಧಿಕಾರಗಳು, ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳು, ಐಪಿಎಲ್ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.


ಇದನ್ನೂ ಓದಿ: ’ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದ ಮೋದಿಗೆ ಯಡಿಯೂರಪ್ಪ ಮೇಲಿನ ಆರೋಪ ಕಣ್ಣಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...