Homeಕರ್ನಾಟಕಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

- Advertisement -
- Advertisement -

ಇಬ್ಬರು ಮುಸ್ಲಿಮ್ ಬಾಲಕಿಯರ ಮೇಲೆ ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಇಲ್ಲಿನ ಕೆಆರ್‌ಸಿ ವೃತ್ತದ ಕಟ್ಟಡವೊಂದಕ್ಕೆ ಬಾಲಕಿಯರನ್ನು ಎಳೆದೊಯ್ದು ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿನಿಯರು ಶನಿವಾರಸಂತೆ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಶಾಲೆಗೆ ತೆರಳಿದ್ದರು. ಈ ವೇಳೆ ಇವರಿಬ್ಬರ ಅನ್ಯಧರ್ಮದ ಸ್ನೇಹಿತೆ ಬುರ್ಕಾವನ್ನು ಪಡೆದು ಸಂಜೆ ಹಿಂತಿರುಗಿಸುವುದಾಗಿ ತಿಳಿಸಿದ್ದಳು. ಅದರಿಂದ ಈ ಇಬ್ಬರು ಮುಸ್ಲಿಂ ಗೆಳತಿಯರಲ್ಲಿ ಒಬ್ಬಾಕೆ, ತನ್ನ ಸ್ನೇಹಿತೆಗೆ ಬುರ್ಕಾವನ್ನು ನೀಡಿದ್ದಳು. ಬರ್ಖಾ ತೆಗೆದುಕೊಂಡು ಹೋದ ಬಾಲಕಿ ವಾಪಸ್ ಸಂಜೆಯಾದರೂ ತಂದುಕೊಟ್ಟಿರಲಿಲ್ಲ.

ಮುಸ್ಲಿಂ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ್ತಾ ಶನಿವಾರಸಂತೆ ಕೆಆರ್‌ಸಿ ವೃತ್ತದ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಹುಡುಗನ ಮೂಲಕ ಇಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಮತೀಯ ಗೂಂಡಾಗಳು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್‌ಗೆ ಒಳೆದೊಯ್ದಯ ವಿಚಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಗಾಯಗೊಂಡಿದ್ದರಿಂದ ಸರ್ಕಾರಿ ಪೊಲೀಸ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಮೂರ್ತಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಜೊತೆಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ ಟ್ವಿಟ್ಟರ್‌‌ನಲ್ಲಿ #SaveKarnatakaFromFascists #StudentsNotSafeInKarnataka ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿದ್ದು, ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಮತೀಯ ಗೂಂಡಾಗಿರಿಯಿಂದಾಗಿ ಆತಂಕ ವ್ಯಕ್ತವಾಗಿದೆ.

ಬಾಲಕಿಯರನ್ನು ಅಮಾನುಷವಾಗಿ ವಿಚಾರಣೆಗೆ ಒಳಪಡಿಸುತ್ತಿರುವ ಮತೀಯ ಗೂಂಡಾಗಿರಿಯ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಇದರ ವಿರುದ್ಧ ದನಿ ಎತ್ತಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಕ್ರಿಯೆಗೆ ಪ್ರತಿಕ್ರಿಯೆಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ ಬಳಿಕ ಮತೀಯ ಗೂಂಡಾಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇನ್ನೊಬ್ಬರ ಊಟ, ವಸ್ತ್ರ, ಆಯ್ಕೆ ಸ್ವತಂತ್ರವನ್ನು ಅನ್ಯವ್ಯಕ್ತಿ ನಿರ್ಧರಿಸುತ್ತಿರುವುದು ಆತಂಕಕಾರಿ. ಸಂವಿಧಾನ ವಿರೋಧಿಯಾಗಿರುವ ಮಾರಲ್‌ ಪೊಲೀಸಿಂಗ್‌ಗೆ ಕಡಿವಾಣ ಬೀಳಬೇಕು ಎಂಬುದು ಜನರ ಆಗ್ರಹ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮತೀಯ ಗೂಂಡಾಗಿರಿಗೆ ದಿಕ್ಕಾರವಿರಲಿ. ಈ ಗೂಂಡಾಗಿರಿಯನ್ನು ಎಸಗಿರುವ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕೋಮುಕ್ರಿಮಿಗಳ ರಾಜ್ಯಭಾರ. ರೌಡಿ ಸಮರ್ಥಕನೊಬ್ಬ ಮುಖ್ಯಮಂತ್ರಿ. ಆಜಯ್ ಕುಮಾರ್ ಬಿಷ್ಟನ ಉತ್ತರಪ್ರದೇಶವಾಗುತ್ತಿದೆ
    ಕರ್ನಾಟಕ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...