Homeಕರ್ನಾಟಕಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

- Advertisement -
- Advertisement -

ಇಬ್ಬರು ಮುಸ್ಲಿಮ್ ಬಾಲಕಿಯರ ಮೇಲೆ ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಇಲ್ಲಿನ ಕೆಆರ್‌ಸಿ ವೃತ್ತದ ಕಟ್ಟಡವೊಂದಕ್ಕೆ ಬಾಲಕಿಯರನ್ನು ಎಳೆದೊಯ್ದು ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿನಿಯರು ಶನಿವಾರಸಂತೆ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಶಾಲೆಗೆ ತೆರಳಿದ್ದರು. ಈ ವೇಳೆ ಇವರಿಬ್ಬರ ಅನ್ಯಧರ್ಮದ ಸ್ನೇಹಿತೆ ಬುರ್ಕಾವನ್ನು ಪಡೆದು ಸಂಜೆ ಹಿಂತಿರುಗಿಸುವುದಾಗಿ ತಿಳಿಸಿದ್ದಳು. ಅದರಿಂದ ಈ ಇಬ್ಬರು ಮುಸ್ಲಿಂ ಗೆಳತಿಯರಲ್ಲಿ ಒಬ್ಬಾಕೆ, ತನ್ನ ಸ್ನೇಹಿತೆಗೆ ಬುರ್ಕಾವನ್ನು ನೀಡಿದ್ದಳು. ಬರ್ಖಾ ತೆಗೆದುಕೊಂಡು ಹೋದ ಬಾಲಕಿ ವಾಪಸ್ ಸಂಜೆಯಾದರೂ ತಂದುಕೊಟ್ಟಿರಲಿಲ್ಲ.

ಮುಸ್ಲಿಂ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ್ತಾ ಶನಿವಾರಸಂತೆ ಕೆಆರ್‌ಸಿ ವೃತ್ತದ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಹುಡುಗನ ಮೂಲಕ ಇಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಮತೀಯ ಗೂಂಡಾಗಳು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್‌ಗೆ ಒಳೆದೊಯ್ದಯ ವಿಚಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಗಾಯಗೊಂಡಿದ್ದರಿಂದ ಸರ್ಕಾರಿ ಪೊಲೀಸ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಮೂರ್ತಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಜೊತೆಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ ಟ್ವಿಟ್ಟರ್‌‌ನಲ್ಲಿ #SaveKarnatakaFromFascists #StudentsNotSafeInKarnataka ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿದ್ದು, ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಮತೀಯ ಗೂಂಡಾಗಿರಿಯಿಂದಾಗಿ ಆತಂಕ ವ್ಯಕ್ತವಾಗಿದೆ.

ಬಾಲಕಿಯರನ್ನು ಅಮಾನುಷವಾಗಿ ವಿಚಾರಣೆಗೆ ಒಳಪಡಿಸುತ್ತಿರುವ ಮತೀಯ ಗೂಂಡಾಗಿರಿಯ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಇದರ ವಿರುದ್ಧ ದನಿ ಎತ್ತಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಕ್ರಿಯೆಗೆ ಪ್ರತಿಕ್ರಿಯೆಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ ಬಳಿಕ ಮತೀಯ ಗೂಂಡಾಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇನ್ನೊಬ್ಬರ ಊಟ, ವಸ್ತ್ರ, ಆಯ್ಕೆ ಸ್ವತಂತ್ರವನ್ನು ಅನ್ಯವ್ಯಕ್ತಿ ನಿರ್ಧರಿಸುತ್ತಿರುವುದು ಆತಂಕಕಾರಿ. ಸಂವಿಧಾನ ವಿರೋಧಿಯಾಗಿರುವ ಮಾರಲ್‌ ಪೊಲೀಸಿಂಗ್‌ಗೆ ಕಡಿವಾಣ ಬೀಳಬೇಕು ಎಂಬುದು ಜನರ ಆಗ್ರಹ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮತೀಯ ಗೂಂಡಾಗಿರಿಗೆ ದಿಕ್ಕಾರವಿರಲಿ. ಈ ಗೂಂಡಾಗಿರಿಯನ್ನು ಎಸಗಿರುವ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕೋಮುಕ್ರಿಮಿಗಳ ರಾಜ್ಯಭಾರ. ರೌಡಿ ಸಮರ್ಥಕನೊಬ್ಬ ಮುಖ್ಯಮಂತ್ರಿ. ಆಜಯ್ ಕುಮಾರ್ ಬಿಷ್ಟನ ಉತ್ತರಪ್ರದೇಶವಾಗುತ್ತಿದೆ
    ಕರ್ನಾಟಕ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...