ಇಬ್ಬರು ಮುಸ್ಲಿಮ್ ಬಾಲಕಿಯರ ಮೇಲೆ ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ನಡೆದಿದೆ. ಇಲ್ಲಿನ ಕೆಆರ್ಸಿ ವೃತ್ತದ ಕಟ್ಟಡವೊಂದಕ್ಕೆ ಬಾಲಕಿಯರನ್ನು ಎಳೆದೊಯ್ದು ಸಂಘಪರಿವಾರದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಹಲ್ಲೆಗೊಳಗಾದ ಮುಸ್ಲಿಂ ವಿದ್ಯಾರ್ಥಿನಿಯರು ಶನಿವಾರಸಂತೆ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಶಾಲೆಗೆ ತೆರಳಿದ್ದರು. ಈ ವೇಳೆ ಇವರಿಬ್ಬರ ಅನ್ಯಧರ್ಮದ ಸ್ನೇಹಿತೆ ಬುರ್ಕಾವನ್ನು ಪಡೆದು ಸಂಜೆ ಹಿಂತಿರುಗಿಸುವುದಾಗಿ ತಿಳಿಸಿದ್ದಳು. ಅದರಿಂದ ಈ ಇಬ್ಬರು ಮುಸ್ಲಿಂ ಗೆಳತಿಯರಲ್ಲಿ ಒಬ್ಬಾಕೆ, ತನ್ನ ಸ್ನೇಹಿತೆಗೆ ಬುರ್ಕಾವನ್ನು ನೀಡಿದ್ದಳು. ಬರ್ಖಾ ತೆಗೆದುಕೊಂಡು ಹೋದ ಬಾಲಕಿ ವಾಪಸ್ ಸಂಜೆಯಾದರೂ ತಂದುಕೊಟ್ಟಿರಲಿಲ್ಲ.
ಮುಸ್ಲಿಂ ವಿದ್ಯಾರ್ಥಿಗಳು ಬಸ್ಗಾಗಿ ಕಾಯುತ್ತಾ ಶನಿವಾರಸಂತೆ ಕೆಆರ್ಸಿ ವೃತ್ತದ ಬಳಿ ನಿಂತಿದ್ದಾಗ ಬುರ್ಖಾ ಪಡೆದುಕೊಂಡ ವಿದ್ಯಾರ್ಥಿನಿ ಹುಡುಗನ ಮೂಲಕ ಇಲ್ಲಿಗೆ ತಂದು ಕೊಟ್ಟಿದ್ದಾಳೆ. ಈ ವೇಳೆ ಮತೀಯ ಗೂಂಡಾಗಳು ಈ ಮೂವರು ವಿದ್ಯಾರ್ಥಿಗಳನ್ನು ಸಮೀಪದ ಕಾಂಪ್ಲೆಕ್ಸ್ಗೆ ಒಳೆದೊಯ್ದಯ ವಿಚಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಅಷ್ಟರಲ್ಲಿ ವಿಷಯ ಅರಿತ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ರಕ್ಷಿಸಿ ಮನೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯರು ಗಾಯಗೊಂಡಿದ್ದರಿಂದ ಸರ್ಕಾರಿ ಪೊಲೀಸ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ನೂರಾರು ಯುವಕರು ಆಸ್ಪತ್ರೆಯ ಮುಂಭಾಗ ಜಮಾಯಿಸಿ ಆರೋಪಿಗಳ ಬಂಧಕ್ಕೆ ಒತ್ತಾಯಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಶಿವಮೂರ್ತಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಜೊತೆಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಇದರ ಜೊತೆಗೆ ಟ್ವಿಟ್ಟರ್ನಲ್ಲಿ #SaveKarnatakaFromFascists #StudentsNotSafeInKarnataka ಹ್ಯಾಷ್ಟ್ಯಾಗ್ಗಳು ಟ್ರೆಂಡ್ ಆಗಿದ್ದು, ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಮತೀಯ ಗೂಂಡಾಗಿರಿಯಿಂದಾಗಿ ಆತಂಕ ವ್ಯಕ್ತವಾಗಿದೆ.
2 Muslim girl students were assaulted & attacked after making the video by Sangh Parivar goons.
The attacks on students in Kodagu is highly condemnable, @DgpKarnataka, @SPKodagu must take immediate action on this goons.#SaveKarnatakaFromFascists #StudentsNotSafeInKarnataka pic.twitter.com/YauPfooEQM
— Safa ?? (@SafaSpeaks) November 19, 2021
ಬಾಲಕಿಯರನ್ನು ಅಮಾನುಷವಾಗಿ ವಿಚಾರಣೆಗೆ ಒಳಪಡಿಸುತ್ತಿರುವ ಮತೀಯ ಗೂಂಡಾಗಿರಿಯ ವಿಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಇದರ ವಿರುದ್ಧ ದನಿ ಎತ್ತಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.
ಕ್ರಿಯೆಗೆ ಪ್ರತಿಕ್ರಿಯೆಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ ಬಳಿಕ ಮತೀಯ ಗೂಂಡಾಗಳ ಹಾವಳಿ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇನ್ನೊಬ್ಬರ ಊಟ, ವಸ್ತ್ರ, ಆಯ್ಕೆ ಸ್ವತಂತ್ರವನ್ನು ಅನ್ಯವ್ಯಕ್ತಿ ನಿರ್ಧರಿಸುತ್ತಿರುವುದು ಆತಂಕಕಾರಿ. ಸಂವಿಧಾನ ವಿರೋಧಿಯಾಗಿರುವ ಮಾರಲ್ ಪೊಲೀಸಿಂಗ್ಗೆ ಕಡಿವಾಣ ಬೀಳಬೇಕು ಎಂಬುದು ಜನರ ಆಗ್ರಹ.
ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ
ಈ ಮತೀಯ ಗೂಂಡಾಗಿರಿಗೆ ದಿಕ್ಕಾರವಿರಲಿ. ಈ ಗೂಂಡಾಗಿರಿಯನ್ನು ಎಸಗಿರುವ ಎಲ್ಲರಿಗೂ ಶಿಕ್ಷೆ ಆಗಬೇಕು.
ಕೋಮುಕ್ರಿಮಿಗಳ ರಾಜ್ಯಭಾರ. ರೌಡಿ ಸಮರ್ಥಕನೊಬ್ಬ ಮುಖ್ಯಮಂತ್ರಿ. ಆಜಯ್ ಕುಮಾರ್ ಬಿಷ್ಟನ ಉತ್ತರಪ್ರದೇಶವಾಗುತ್ತಿದೆ
ಕರ್ನಾಟಕ.