Homeಕರ್ನಾಟಕಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

- Advertisement -
- Advertisement -

ಬುಧವಾರ ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿಯ ಕೆಲವು ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷರ ಮೇಲೆ ಎಸೆದು ಅತಿರೇಕದ ವರ್ತನೆ ಪ್ರದರ್ಶನ ಮಾಡಿದ್ದಾರೆ. ”ಬಿಜೆಪಿಯವರು ಸದನದಲ್ಲಿ ತಾಲಿಬಾನಿಗಳಿಗಿಂತ ಅಸಭ್ಯವಾಗಿ ಸ್ಪೀಕರ್ ಮೇಲೆಯೇ ಗೂಂಡಾಗಿರಿ ನಡೆಸಿದ್ದಾರೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಡಿಯೋ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ”ಬೊಮ್ಮಾಯಿಯವರು ನಮಗೆ ತಾಲಿಬಾನ್ ಸರ್ಕಾರ ಎಂದಿದ್ದಾರೆ. ಆದರೆ, ಬೊಮ್ಮಾಯಿಯವರು ಉತ್ತರಿಸಲೇಬೇಕಾದ ಪ್ರಶ್ನೆ ಒಂದಿದೆ. ಬೊಮ್ಮಾಯಿ ಅವರು ಪಾಕಿಸ್ತಾನದಲ್ಲಿ ಯಾವಾಗ ಮುಖ್ಯಮಂತ್ರಿಯಾಗಿದ್ದರು, ಯಾಕಾಗಿ ಆಗಿದ್ದರು? ಈ ಪ್ರಶ್ನೆ ನಾವು ಕೇಳುತ್ತಿರುವುದಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬೊಮ್ಮಾಯಿಯವರ ಪ್ರತಿಸ್ಪರ್ಧಿಯಾಗಿರುವ ಅವರದ್ದೇ ಪಕ್ಷದ ಯತ್ನಾಳ್ ಅವರು ಕೇಳುತ್ತಿರುವುದು” ಎಂದು ಹೇಳಿದ್ದಾರೆ.

”ಬೊಮ್ಮಾಯಿ ಅವರಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೇ ಲಾಹೋರ್ ಮುಖ್ಯಮಂತ್ರಿಯೇ ಎಂದು ಕೇಳಿದ್ದರಂತೆ, ಬೊಮ್ಮಾಯಿ ಅವರು ಯತ್ನಾಳ್ ಅವರ ಈ ಮಾತಿಗೆ ಏನು ಹೇಳುತ್ತಾರೋ ಅದನ್ನು ಮೊದಲು ಸ್ಪಷ್ಟಪಡಿಸಲಿ, ನಂತರ ತಾಲಿಬಾನ್ ಕಡೆ ಹೋಗಲಿ” ಎಂದು ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಸದನದಲ್ಲಿ ಬಿಜೆಪಿಗರ ಅತಿರೇಕದ ವರ್ತನೆ: 10 ಶಾಸಕರ ಅಮಾನತು

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...