Homeಕರ್ನಾಟಕಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

- Advertisement -
- Advertisement -

ಬುಧವಾರ ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿಯ ಕೆಲವು ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷರ ಮೇಲೆ ಎಸೆದು ಅತಿರೇಕದ ವರ್ತನೆ ಪ್ರದರ್ಶನ ಮಾಡಿದ್ದಾರೆ. ”ಬಿಜೆಪಿಯವರು ಸದನದಲ್ಲಿ ತಾಲಿಬಾನಿಗಳಿಗಿಂತ ಅಸಭ್ಯವಾಗಿ ಸ್ಪೀಕರ್ ಮೇಲೆಯೇ ಗೂಂಡಾಗಿರಿ ನಡೆಸಿದ್ದಾರೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಡಿಯೋ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ”ಬೊಮ್ಮಾಯಿಯವರು ನಮಗೆ ತಾಲಿಬಾನ್ ಸರ್ಕಾರ ಎಂದಿದ್ದಾರೆ. ಆದರೆ, ಬೊಮ್ಮಾಯಿಯವರು ಉತ್ತರಿಸಲೇಬೇಕಾದ ಪ್ರಶ್ನೆ ಒಂದಿದೆ. ಬೊಮ್ಮಾಯಿ ಅವರು ಪಾಕಿಸ್ತಾನದಲ್ಲಿ ಯಾವಾಗ ಮುಖ್ಯಮಂತ್ರಿಯಾಗಿದ್ದರು, ಯಾಕಾಗಿ ಆಗಿದ್ದರು? ಈ ಪ್ರಶ್ನೆ ನಾವು ಕೇಳುತ್ತಿರುವುದಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬೊಮ್ಮಾಯಿಯವರ ಪ್ರತಿಸ್ಪರ್ಧಿಯಾಗಿರುವ ಅವರದ್ದೇ ಪಕ್ಷದ ಯತ್ನಾಳ್ ಅವರು ಕೇಳುತ್ತಿರುವುದು” ಎಂದು ಹೇಳಿದ್ದಾರೆ.

”ಬೊಮ್ಮಾಯಿ ಅವರಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೇ ಲಾಹೋರ್ ಮುಖ್ಯಮಂತ್ರಿಯೇ ಎಂದು ಕೇಳಿದ್ದರಂತೆ, ಬೊಮ್ಮಾಯಿ ಅವರು ಯತ್ನಾಳ್ ಅವರ ಈ ಮಾತಿಗೆ ಏನು ಹೇಳುತ್ತಾರೋ ಅದನ್ನು ಮೊದಲು ಸ್ಪಷ್ಟಪಡಿಸಲಿ, ನಂತರ ತಾಲಿಬಾನ್ ಕಡೆ ಹೋಗಲಿ” ಎಂದು ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಸದನದಲ್ಲಿ ಬಿಜೆಪಿಗರ ಅತಿರೇಕದ ವರ್ತನೆ: 10 ಶಾಸಕರ ಅಮಾನತು

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...