Homeಕರ್ನಾಟಕಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಸದನದಲ್ಲಿ ಸ್ಪೀಕರ್ ಮೇಲೆಯೇ ಬಿಜೆಪಿಗರಿಂದ ಗೂಂಡಾಗಿರಿ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

- Advertisement -
- Advertisement -

ಬುಧವಾರ ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿಯ ಕೆಲವು ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷರ ಮೇಲೆ ಎಸೆದು ಅತಿರೇಕದ ವರ್ತನೆ ಪ್ರದರ್ಶನ ಮಾಡಿದ್ದಾರೆ. ”ಬಿಜೆಪಿಯವರು ಸದನದಲ್ಲಿ ತಾಲಿಬಾನಿಗಳಿಗಿಂತ ಅಸಭ್ಯವಾಗಿ ಸ್ಪೀಕರ್ ಮೇಲೆಯೇ ಗೂಂಡಾಗಿರಿ ನಡೆಸಿದ್ದಾರೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಡಿಯೋ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ”ಬೊಮ್ಮಾಯಿಯವರು ನಮಗೆ ತಾಲಿಬಾನ್ ಸರ್ಕಾರ ಎಂದಿದ್ದಾರೆ. ಆದರೆ, ಬೊಮ್ಮಾಯಿಯವರು ಉತ್ತರಿಸಲೇಬೇಕಾದ ಪ್ರಶ್ನೆ ಒಂದಿದೆ. ಬೊಮ್ಮಾಯಿ ಅವರು ಪಾಕಿಸ್ತಾನದಲ್ಲಿ ಯಾವಾಗ ಮುಖ್ಯಮಂತ್ರಿಯಾಗಿದ್ದರು, ಯಾಕಾಗಿ ಆಗಿದ್ದರು? ಈ ಪ್ರಶ್ನೆ ನಾವು ಕೇಳುತ್ತಿರುವುದಲ್ಲ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬೊಮ್ಮಾಯಿಯವರ ಪ್ರತಿಸ್ಪರ್ಧಿಯಾಗಿರುವ ಅವರದ್ದೇ ಪಕ್ಷದ ಯತ್ನಾಳ್ ಅವರು ಕೇಳುತ್ತಿರುವುದು” ಎಂದು ಹೇಳಿದ್ದಾರೆ.

”ಬೊಮ್ಮಾಯಿ ಅವರಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೇ ಲಾಹೋರ್ ಮುಖ್ಯಮಂತ್ರಿಯೇ ಎಂದು ಕೇಳಿದ್ದರಂತೆ, ಬೊಮ್ಮಾಯಿ ಅವರು ಯತ್ನಾಳ್ ಅವರ ಈ ಮಾತಿಗೆ ಏನು ಹೇಳುತ್ತಾರೋ ಅದನ್ನು ಮೊದಲು ಸ್ಪಷ್ಟಪಡಿಸಲಿ, ನಂತರ ತಾಲಿಬಾನ್ ಕಡೆ ಹೋಗಲಿ” ಎಂದು ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಸದನದಲ್ಲಿ ಬಿಜೆಪಿಗರ ಅತಿರೇಕದ ವರ್ತನೆ: 10 ಶಾಸಕರ ಅಮಾನತು

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...