Homeಕರ್ನಾಟಕಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

- Advertisement -
- Advertisement -

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮರಳಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ನಾಯಕರಿಗೆ ಸಲಹೆಯನ್ನು ನೀಡಿದ್ದು, ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸುವಂತೆ ಸೂಚಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ನಾಯಕರಿಗೆ ಈ ಸಂದೇಶವನ್ನು ನೀಡಿದೆ. ಅವರು ಇಂದು ಬಂದು ನಾಳೆ ನಿರ್ಗಮಿಸುವ ಪರಿಸ್ಥಿತಿ ಆಗಬಾರದು ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಪಕ್ಷ ತೊರೆದು ಕಾಂಗ್ರೆಸ್‌ನಿಂದ ಬಿಜೆಪಿಗೆ ಮರಳಿದ ಹಿನ್ನೆಲೆಯಲ್ಲಿ ಶುಕ್ರವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಖರ್ಗೆ, ಇತರ ಬೇರೆ ಪಕ್ಷಗಳ ನಾಯಕರನ್ನು ಸೆಳೆದು ಪಕ್ಷವನ್ನು ಬಲಪಡಿಸುವುದು ನ್ಯಾಯಯುತವಾಗಿದೆ. ಆದರೆ ಅವರ ನಿಷ್ಠೆಯನ್ನು ಪರಿಶೀಲಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಖರೀದಿಸುವ ಸಮಯದಲ್ಲಿ, ಖರೀದಿದಾರರು ಅನೇಕ ಬಾರಿ ಯೋಚಿಸುತ್ತಾರೆ ಮತ್ತು ಅವುಗಳ ತೂಕ, ಅಳತೆಯನ್ನು ಪರಿಶೀಲಿಸುತ್ತಾರೆ. ಅಂತೆಯೇ ಇತರರನ್ನು ಕಾಂಗ್ರೆಸ್‌ಗೆ    ಸೇರ್ಪಡೆ ಮಾಡುವಾಗ ಎಚ್ಚರಿಕೆಯಿಂದ ಪರಿಗಣಿಸಬೇಕು. ಅವರನ್ನು ಪಕ್ಷಕ್ಕೆ ಕರೆತರುವಾಗ ಅವರ ಪಾತ್ರ, ಅವರು ಇದ್ದ ಪರಿಸ್ಥಿತಿ ಮತ್ತು ಸಿದ್ಧಾಂತಗಳು, ಅವರ ನಂಬಿಕೆ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಪಕ್ಷವು ಸಿದ್ಧಾಂತ ಮತ್ತು ತತ್ವಗಳ ಆಧಾರ ಸ್ತಂಭಗಳ ಮೇಲೆ ನಿಂತಿದೆ. ಪಕ್ಷದ ನಾಯಕರು ದೇಶದ ಏಕತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷವು ಬಡವರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಬಗ್ಗೆ ಕಾಳಜಿ ವಹಿಸುತ್ತದೆ. ಅನೇಕ ದೇಶಗಳಲ್ಲಿ ವಿಶೇಷವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇತ್ತೀಚಿನ ಎರಡು ಮೂರು ದಶಕಗಳವರೆಗೆ ಮಹಿಳೆಯರಿಗೆ ಮತದಾನದ ಹಕ್ಕುಗಳನ್ನು ನೀಡಲಾಗಿಲ್ಲ. ಆದರೆ ಸಂವಿಧಾನ ಜಾರಿಗೆ ಬಂದಾಗ ಭಾರತದಲ್ಲಿ ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಲಾಯಿತು. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಇದರ ಹಿಂದೆ ಶ್ರಮಿಸಿದ್ದರು ಎಂದು ಖರ್ಗೆ ಹೇಳಿದ್ದಾರೆ.

ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಈ ಮೌಲ್ಯಗಳನ್ನು ರಕ್ಷಿಸಬೇಕಾಗಿದೆ. ಹಲವರಿಗೆ ಇತಿಹಾಸ ಗೊತ್ತಿಲ್ಲ, ಸ್ವಾತಂತ್ರ್ಯ ಹೋರಾಟ ನಡೆಸಿದವರು ಯಾರು? ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬುದು ಯುವಕರಿಗೆ ಗೊತ್ತಿಲ್ಲ. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಸಂವಿಧಾನವನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನವನ್ನು ಉಳಿಸಿದರೆ ಭವಿಷ್ಯದ ಪೀಳಿಗೆಗೆ ಅವಕಾಶಗಳು ಸಿಗುತ್ತವೆ ಎಂದು ಹೇಳಿದ್ದಾರೆ.

ಸಂವಿಧಾನವನ್ನು ಜಾರಿಗೊಳಿಸುವ ಜನರು ನ್ಯಾಯಯುತ ವ್ಯಕ್ತಿಗಳಾಗಿರಬೇಕು, ಆಗ ಅದು ಉತ್ತಮ ಪರಿಣಾಮಗಳನ್ನು ಬೀರುತ್ತದೆ ಇಲ್ಲದಿದ್ದರೆ ಫಲಿತಾಂಶಗಳು ಉತ್ತಮವಾಗಿರುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. 1949ರಲ್ಲಿ ಅಂಬೇಡ್ಕರ್ ಹೇಳಿದ ಮಾತು ಇಂದಿನ ದಿನಗಳಲ್ಲಿ ನಿಜವಾಗುತ್ತಿದೆ. ಸಂವಿಧಾನವನ್ನು ಅನುಷ್ಠಾನಕ್ಕೆ ತರುತ್ತಿರುವ ಜನರು ಸದುದ್ದೇಶವನ್ನು ಹೊಂದಿಲ್ಲದಿರುವುದರಿಂದ, ರಾಷ್ಟ್ರವು ಅನೇಕ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ಎದುರಿಸುತ್ತಿದೆ ಎಂದು ಖರ್ಗೆ ಹೇಳಿದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...