Homeಕರ್ನಾಟಕಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ, ಹಿನ್ನೆಲೆ ಪರಿಶೀಲಿಸಿ: ರಾಜ್ಯ ನಾಯಕರಿಗೆ ಖರ್ಗೆ ಸೂಚನೆ

- Advertisement -
- Advertisement -

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮರಳಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ನಾಯಕರಿಗೆ ಸಲಹೆಯನ್ನು ನೀಡಿದ್ದು, ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸುವಂತೆ ಸೂಚಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ನಾಯಕರಿಗೆ ಈ ಸಂದೇಶವನ್ನು ನೀಡಿದೆ. ಅವರು ಇಂದು ಬಂದು ನಾಳೆ ನಿರ್ಗಮಿಸುವ ಪರಿಸ್ಥಿತಿ ಆಗಬಾರದು ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಪಕ್ಷ ತೊರೆದು ಕಾಂಗ್ರೆಸ್‌ನಿಂದ ಬಿಜೆಪಿಗೆ ಮರಳಿದ ಹಿನ್ನೆಲೆಯಲ್ಲಿ ಶುಕ್ರವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಖರ್ಗೆ, ಇತರ ಬೇರೆ ಪಕ್ಷಗಳ ನಾಯಕರನ್ನು ಸೆಳೆದು ಪಕ್ಷವನ್ನು ಬಲಪಡಿಸುವುದು ನ್ಯಾಯಯುತವಾಗಿದೆ. ಆದರೆ ಅವರ ನಿಷ್ಠೆಯನ್ನು ಪರಿಶೀಲಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಖರೀದಿಸುವ ಸಮಯದಲ್ಲಿ, ಖರೀದಿದಾರರು ಅನೇಕ ಬಾರಿ ಯೋಚಿಸುತ್ತಾರೆ ಮತ್ತು ಅವುಗಳ ತೂಕ, ಅಳತೆಯನ್ನು ಪರಿಶೀಲಿಸುತ್ತಾರೆ. ಅಂತೆಯೇ ಇತರರನ್ನು ಕಾಂಗ್ರೆಸ್‌ಗೆ    ಸೇರ್ಪಡೆ ಮಾಡುವಾಗ ಎಚ್ಚರಿಕೆಯಿಂದ ಪರಿಗಣಿಸಬೇಕು. ಅವರನ್ನು ಪಕ್ಷಕ್ಕೆ ಕರೆತರುವಾಗ ಅವರ ಪಾತ್ರ, ಅವರು ಇದ್ದ ಪರಿಸ್ಥಿತಿ ಮತ್ತು ಸಿದ್ಧಾಂತಗಳು, ಅವರ ನಂಬಿಕೆ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಪಕ್ಷವು ಸಿದ್ಧಾಂತ ಮತ್ತು ತತ್ವಗಳ ಆಧಾರ ಸ್ತಂಭಗಳ ಮೇಲೆ ನಿಂತಿದೆ. ಪಕ್ಷದ ನಾಯಕರು ದೇಶದ ಏಕತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷವು ಬಡವರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಬಗ್ಗೆ ಕಾಳಜಿ ವಹಿಸುತ್ತದೆ. ಅನೇಕ ದೇಶಗಳಲ್ಲಿ ವಿಶೇಷವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇತ್ತೀಚಿನ ಎರಡು ಮೂರು ದಶಕಗಳವರೆಗೆ ಮಹಿಳೆಯರಿಗೆ ಮತದಾನದ ಹಕ್ಕುಗಳನ್ನು ನೀಡಲಾಗಿಲ್ಲ. ಆದರೆ ಸಂವಿಧಾನ ಜಾರಿಗೆ ಬಂದಾಗ ಭಾರತದಲ್ಲಿ ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಲಾಯಿತು. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಮತ್ತು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಇದರ ಹಿಂದೆ ಶ್ರಮಿಸಿದ್ದರು ಎಂದು ಖರ್ಗೆ ಹೇಳಿದ್ದಾರೆ.

ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಈ ಮೌಲ್ಯಗಳನ್ನು ರಕ್ಷಿಸಬೇಕಾಗಿದೆ. ಹಲವರಿಗೆ ಇತಿಹಾಸ ಗೊತ್ತಿಲ್ಲ, ಸ್ವಾತಂತ್ರ್ಯ ಹೋರಾಟ ನಡೆಸಿದವರು ಯಾರು? ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂಬುದು ಯುವಕರಿಗೆ ಗೊತ್ತಿಲ್ಲ. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಸಂವಿಧಾನವನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನವನ್ನು ಉಳಿಸಿದರೆ ಭವಿಷ್ಯದ ಪೀಳಿಗೆಗೆ ಅವಕಾಶಗಳು ಸಿಗುತ್ತವೆ ಎಂದು ಹೇಳಿದ್ದಾರೆ.

ಸಂವಿಧಾನವನ್ನು ಜಾರಿಗೊಳಿಸುವ ಜನರು ನ್ಯಾಯಯುತ ವ್ಯಕ್ತಿಗಳಾಗಿರಬೇಕು, ಆಗ ಅದು ಉತ್ತಮ ಪರಿಣಾಮಗಳನ್ನು ಬೀರುತ್ತದೆ ಇಲ್ಲದಿದ್ದರೆ ಫಲಿತಾಂಶಗಳು ಉತ್ತಮವಾಗಿರುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. 1949ರಲ್ಲಿ ಅಂಬೇಡ್ಕರ್ ಹೇಳಿದ ಮಾತು ಇಂದಿನ ದಿನಗಳಲ್ಲಿ ನಿಜವಾಗುತ್ತಿದೆ. ಸಂವಿಧಾನವನ್ನು ಅನುಷ್ಠಾನಕ್ಕೆ ತರುತ್ತಿರುವ ಜನರು ಸದುದ್ದೇಶವನ್ನು ಹೊಂದಿಲ್ಲದಿರುವುದರಿಂದ, ರಾಷ್ಟ್ರವು ಅನೇಕ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ಎದುರಿಸುತ್ತಿದೆ ಎಂದು ಖರ್ಗೆ ಹೇಳಿದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...