Homeಕರ್ನಾಟಕರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು...

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು…

- Advertisement -
- Advertisement -

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ತೀವ್ರ ಇಳಿಕೆಯಾಗಿದ್ದು ಈ ಕುರಿತು ಕಾರಣಗಳನ್ನು ನೀಡುವಂತೆ ಅಬಕಾರಿ ಆಯುಕ್ತರು ಎಲ್ಲಾ ಜಿಲ್ಲೆಗಳ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕರುಣಾಕರ ರೆಡ್ಡಿಯವರು ಅಬಕಾರಿ ಇಲಾಖೆಯನ್ನೇ ದೂರಿದ್ದಾರೆ. ಪ್ರತಿ ವರ್ಷ ಶೇ.6-7% ನಷ್ಟು ಬಿಯರ್‌ ಮಾರಾಟದಲ್ಲಿ ಹೆಚ್ಚಳವಾಗುತ್ತಿತ್ತು. ಆದರೆ ಆಗ ಬಾರ್‌ ಮಾಲೀಕರ ಬೇಡಿಕೆಗನುಗುಣವಾಗಿ ಅಬಕಾರಿ ಇಲಾಖೆಯು ಪೂರೈಕೆ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಅರ್ಧದಷ್ಟು ಮಾತ್ರ ಬಿಯರ್‌ ಪೂರೈಕೆ ಮಾಡುತ್ತಿದ್ದರು. ಸ್ಟಾಕ್‌ ಇದ್ದರೂ ಕೂಡ ಐಎಂಎಲ್‌ (ವೈನ್‌, ಬ್ರಾಂದಿ ಮತ್ತು ವಿಸ್ಕಿ) ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲೆಂಬ ಕಾರಣದಿಂದ ಬಿಯರ್‌ ಪೂರೈಕೆ ಮಾಡುತ್ತಿರಲಿಲ್ಲ. ಹಾಗಾಗಿ ಜನ ಬಿಯರ್‌ ಸಿಗುತ್ತಿಲ್ಲ ಎಂದು ಭಾವಿಸಿದ್ದರಿಂದ ಮಾರಾಟದಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ.

ನಾವು ಮುಖ್ಯಮಂತ್ರಿಯಾದಿಗಾಗಿ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿರಲಿಲ್ಲ. ಐಎಂಎಲ್‌ ಮದ್ಯದ ಹೆಚ್ಚಿನ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಭಾರೀ ಒತ್ತಡ ಇತ್ತು. ಆದರೆ ಹಲವು ಯುವಜನ ಮತ್ತು ಮಹಿಳೆಯರು ಐಎಂಎಲ್‌ ಬದಲಿಗೆ ಬಿಯರ್‌ ಅನ್ನೇ ಇಷ್ಟಪಡುತ್ತಾರೆ. ಆದರೆ ಅಬಕಾರಿ ಇಲಾಖೆಯು ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಕುಸಿತ ಕಾರಣವೇ?

ದೇಶಾದ್ಯಂತ ಆವರಿಸಿರುವ ಆರ್ಥಿಕ ಕುಸಿತ ಎಲ್ಲಾ ಕ್ಷೇತ್ರಗಳ ಮೇಲೂ ಪ್ರಭಾವ ಬೀರುತ್ತಿದೆ. ಮುಖ್ಯವಾಗಿ ಆರ್ಥಿಕ ಕುಸಿತದಿಂದ ಬಹಳಷ್ಟು ಯುವಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಾಗಾಗಿ ಜನಸಾಮಾನ್ಯರು ಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಅದು ಬಿಯರ್‌ ಮಾರಾಟದ ಮೇಲೆಯೂ ಬಿದ್ದಿರಬಹುದು ಎಂಬ ಸಂಶಯ ಸಹ ಇದೆ.

ಬಿಯರ್‌ ಮತ್ತು ಐಎಂಎಲ್‌ ಮದ್ಯದ ನಡುವೆ ಏನು ವ್ಯತ್ಯಾಸ?

ಬಿಯರ್‌‌ನಲ್ಲಿ ಆಲ್ಕೋಹಾಲಿಕ್ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿರುತ್ತದೆ. ಶೇ.4-6% ಮಾತ್ರ ಆಲ್ಕೋ ಹಾಲಿಕ್‌ ಬಿಯರ್‌ನಲ್ಲಿದ್ದರು ವಿಸ್ಕಿಯಲ್ಲಿ ಅದರು ಶೇ.40% ರಷ್ಟಿರುತ್ತದೆ. ಬೆಲೆಯಲ್ಲಿಯೂ ಸಹ ಬಿಯರ್‌ಗಿಂತ ಉಳಿದ ಮದ್ಯದ ಬೆಲೆ ಹೆಚ್ಚಿರುತ್ತದೆ.

ರಾಜ್ಯ ಸರ್ಕಾರದಿಂದ ಟಾರ್ಗೆಟ್‌:

ಈ ವರ್ಷದ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ ರಾಜಸ್ವ ಸಂಗ್ರಹಣೆ ಗುರಿ ಎಂದು ಘೋಷಿಸಿದ್ದರು. ಹಾಗಾಗಿ ಅಬಕಾರಿ ಇಲಾಖೆಯು ಪ್ರತಿ ತಿಂಗಳು, ಪ್ರತಿ ವರ್ಷವೂ ಸಹ ಎಲ್ಲಾ ಮದ್ಯ ಮಾರಾಟ ಮಳಿಗೆಗಳಿಗೆ ಇಂತಿಷ್ಟು ಮದ್ಯ ಮಾರಟ ಮಾಡಲೇಬೇಕೆಂಬ ಟಾರ್ಗೆಟ್‌ ಕೊಡಲಾಗುತ್ತದೆ. ಟಾರ್ಗೆಟ್‌ ಪೂರೈಸಲು ಸತತವಾಗಿ ವಿಫಲವಾದರೆ ಆ ಬಾರ್‌ಗಳ ಲೈಸೈನ್ಸ್‌ ರದ್ದು ಮಾಡುತ್ತೇವೆ ಎಂಬ ಎಚ್ಚರಿಕೆ ಸಹ ನೀಡಲಾಗುತ್ತಿದೆ.

ಹಾಗಾಗಿ ಬಾರ್‌ನ ಮಾಲೀಕರು ಅಕ್ರಮವಾಗಿ ಲೈಸೈನ್ಸ್‌ ಇಲ್ಲದ ಪ್ರತಿ ಊರಿನ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳಿಗೂ ಸರಬರಾಜು ಮಾಡುವ ಮೂಲಕ ಟಾರ್ಗೆಟ್‌ ಪೂರೈಸುತ್ತಿದ್ದಾರೆ. ಅಲ್ಲಿಗೆ ಅಕ್ರಮ ಮದ್ಯ ಮಾರಾಟಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಒಂದು ಕಡೆ ಲಕ್ಷಾಂತರ ಮಹಿಳೆಯರು ಮದ್ಯದಿಂದಾಗಿ ತಮ್ಮ ಕುಟುಂಬವೇ ಸರ್ವನಾಶವಾಗಿದೆ, ಮದ್ಯ ನಿಷೇಧಿಸಿ ಎಂದು ಸತತವಾಗಿ ಹೋರಾಡುತ್ತಿದ್ದರೆ ಸರ್ಕಾರಗಳು ಮಾತ್ರ ಮದ್ಯ ಮಾರಾಟವನ್ನು ಹೆಚ್ಚಿಸುತ್ತಲೇ ಇವೆ. ಹಾಗಾಗಿಯೇ ಬಿಯರ್‌ ಮಾರಾಟ ಇಳಿಕೆಯಾದ ತಕ್ಷಣ ಅಬಕಾರಿ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಮದ್ಯ ನಿಷೇಧ ಆಂದೋಲನದ ಹಕ್ಕೊತ್ತಾಯಗಳು

ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ ನಡೆಸಿರುವ ಮಹಿಳೆಯರು ಯಡಿಯೂರಪ್ಪನವರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಕಾದು ಕುಳಿತರೆ ಸರ್ಕಾರ ಮದ್ಯ ಮಾರಾಟವನ್ನು ಹೆಚ್ಚಿಸಲು ಹೊರಟಿರುವುದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...