Homeಕರ್ನಾಟಕರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು...

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು…

- Advertisement -
- Advertisement -

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ತೀವ್ರ ಇಳಿಕೆಯಾಗಿದ್ದು ಈ ಕುರಿತು ಕಾರಣಗಳನ್ನು ನೀಡುವಂತೆ ಅಬಕಾರಿ ಆಯುಕ್ತರು ಎಲ್ಲಾ ಜಿಲ್ಲೆಗಳ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕರುಣಾಕರ ರೆಡ್ಡಿಯವರು ಅಬಕಾರಿ ಇಲಾಖೆಯನ್ನೇ ದೂರಿದ್ದಾರೆ. ಪ್ರತಿ ವರ್ಷ ಶೇ.6-7% ನಷ್ಟು ಬಿಯರ್‌ ಮಾರಾಟದಲ್ಲಿ ಹೆಚ್ಚಳವಾಗುತ್ತಿತ್ತು. ಆದರೆ ಆಗ ಬಾರ್‌ ಮಾಲೀಕರ ಬೇಡಿಕೆಗನುಗುಣವಾಗಿ ಅಬಕಾರಿ ಇಲಾಖೆಯು ಪೂರೈಕೆ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಅರ್ಧದಷ್ಟು ಮಾತ್ರ ಬಿಯರ್‌ ಪೂರೈಕೆ ಮಾಡುತ್ತಿದ್ದರು. ಸ್ಟಾಕ್‌ ಇದ್ದರೂ ಕೂಡ ಐಎಂಎಲ್‌ (ವೈನ್‌, ಬ್ರಾಂದಿ ಮತ್ತು ವಿಸ್ಕಿ) ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲೆಂಬ ಕಾರಣದಿಂದ ಬಿಯರ್‌ ಪೂರೈಕೆ ಮಾಡುತ್ತಿರಲಿಲ್ಲ. ಹಾಗಾಗಿ ಜನ ಬಿಯರ್‌ ಸಿಗುತ್ತಿಲ್ಲ ಎಂದು ಭಾವಿಸಿದ್ದರಿಂದ ಮಾರಾಟದಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ.

ನಾವು ಮುಖ್ಯಮಂತ್ರಿಯಾದಿಗಾಗಿ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿರಲಿಲ್ಲ. ಐಎಂಎಲ್‌ ಮದ್ಯದ ಹೆಚ್ಚಿನ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಭಾರೀ ಒತ್ತಡ ಇತ್ತು. ಆದರೆ ಹಲವು ಯುವಜನ ಮತ್ತು ಮಹಿಳೆಯರು ಐಎಂಎಲ್‌ ಬದಲಿಗೆ ಬಿಯರ್‌ ಅನ್ನೇ ಇಷ್ಟಪಡುತ್ತಾರೆ. ಆದರೆ ಅಬಕಾರಿ ಇಲಾಖೆಯು ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಕುಸಿತ ಕಾರಣವೇ?

ದೇಶಾದ್ಯಂತ ಆವರಿಸಿರುವ ಆರ್ಥಿಕ ಕುಸಿತ ಎಲ್ಲಾ ಕ್ಷೇತ್ರಗಳ ಮೇಲೂ ಪ್ರಭಾವ ಬೀರುತ್ತಿದೆ. ಮುಖ್ಯವಾಗಿ ಆರ್ಥಿಕ ಕುಸಿತದಿಂದ ಬಹಳಷ್ಟು ಯುವಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಾಗಾಗಿ ಜನಸಾಮಾನ್ಯರು ಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಅದು ಬಿಯರ್‌ ಮಾರಾಟದ ಮೇಲೆಯೂ ಬಿದ್ದಿರಬಹುದು ಎಂಬ ಸಂಶಯ ಸಹ ಇದೆ.

ಬಿಯರ್‌ ಮತ್ತು ಐಎಂಎಲ್‌ ಮದ್ಯದ ನಡುವೆ ಏನು ವ್ಯತ್ಯಾಸ?

ಬಿಯರ್‌‌ನಲ್ಲಿ ಆಲ್ಕೋಹಾಲಿಕ್ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿರುತ್ತದೆ. ಶೇ.4-6% ಮಾತ್ರ ಆಲ್ಕೋ ಹಾಲಿಕ್‌ ಬಿಯರ್‌ನಲ್ಲಿದ್ದರು ವಿಸ್ಕಿಯಲ್ಲಿ ಅದರು ಶೇ.40% ರಷ್ಟಿರುತ್ತದೆ. ಬೆಲೆಯಲ್ಲಿಯೂ ಸಹ ಬಿಯರ್‌ಗಿಂತ ಉಳಿದ ಮದ್ಯದ ಬೆಲೆ ಹೆಚ್ಚಿರುತ್ತದೆ.

ರಾಜ್ಯ ಸರ್ಕಾರದಿಂದ ಟಾರ್ಗೆಟ್‌:

ಈ ವರ್ಷದ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ ರಾಜಸ್ವ ಸಂಗ್ರಹಣೆ ಗುರಿ ಎಂದು ಘೋಷಿಸಿದ್ದರು. ಹಾಗಾಗಿ ಅಬಕಾರಿ ಇಲಾಖೆಯು ಪ್ರತಿ ತಿಂಗಳು, ಪ್ರತಿ ವರ್ಷವೂ ಸಹ ಎಲ್ಲಾ ಮದ್ಯ ಮಾರಾಟ ಮಳಿಗೆಗಳಿಗೆ ಇಂತಿಷ್ಟು ಮದ್ಯ ಮಾರಟ ಮಾಡಲೇಬೇಕೆಂಬ ಟಾರ್ಗೆಟ್‌ ಕೊಡಲಾಗುತ್ತದೆ. ಟಾರ್ಗೆಟ್‌ ಪೂರೈಸಲು ಸತತವಾಗಿ ವಿಫಲವಾದರೆ ಆ ಬಾರ್‌ಗಳ ಲೈಸೈನ್ಸ್‌ ರದ್ದು ಮಾಡುತ್ತೇವೆ ಎಂಬ ಎಚ್ಚರಿಕೆ ಸಹ ನೀಡಲಾಗುತ್ತಿದೆ.

ಹಾಗಾಗಿ ಬಾರ್‌ನ ಮಾಲೀಕರು ಅಕ್ರಮವಾಗಿ ಲೈಸೈನ್ಸ್‌ ಇಲ್ಲದ ಪ್ರತಿ ಊರಿನ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳಿಗೂ ಸರಬರಾಜು ಮಾಡುವ ಮೂಲಕ ಟಾರ್ಗೆಟ್‌ ಪೂರೈಸುತ್ತಿದ್ದಾರೆ. ಅಲ್ಲಿಗೆ ಅಕ್ರಮ ಮದ್ಯ ಮಾರಾಟಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಒಂದು ಕಡೆ ಲಕ್ಷಾಂತರ ಮಹಿಳೆಯರು ಮದ್ಯದಿಂದಾಗಿ ತಮ್ಮ ಕುಟುಂಬವೇ ಸರ್ವನಾಶವಾಗಿದೆ, ಮದ್ಯ ನಿಷೇಧಿಸಿ ಎಂದು ಸತತವಾಗಿ ಹೋರಾಡುತ್ತಿದ್ದರೆ ಸರ್ಕಾರಗಳು ಮಾತ್ರ ಮದ್ಯ ಮಾರಾಟವನ್ನು ಹೆಚ್ಚಿಸುತ್ತಲೇ ಇವೆ. ಹಾಗಾಗಿಯೇ ಬಿಯರ್‌ ಮಾರಾಟ ಇಳಿಕೆಯಾದ ತಕ್ಷಣ ಅಬಕಾರಿ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಮದ್ಯ ನಿಷೇಧ ಆಂದೋಲನದ ಹಕ್ಕೊತ್ತಾಯಗಳು

ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ ನಡೆಸಿರುವ ಮಹಿಳೆಯರು ಯಡಿಯೂರಪ್ಪನವರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಕಾದು ಕುಳಿತರೆ ಸರ್ಕಾರ ಮದ್ಯ ಮಾರಾಟವನ್ನು ಹೆಚ್ಚಿಸಲು ಹೊರಟಿರುವುದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...