Homeಕರ್ನಾಟಕರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು...

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು…

- Advertisement -
- Advertisement -

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ತೀವ್ರ ಇಳಿಕೆಯಾಗಿದ್ದು ಈ ಕುರಿತು ಕಾರಣಗಳನ್ನು ನೀಡುವಂತೆ ಅಬಕಾರಿ ಆಯುಕ್ತರು ಎಲ್ಲಾ ಜಿಲ್ಲೆಗಳ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕರುಣಾಕರ ರೆಡ್ಡಿಯವರು ಅಬಕಾರಿ ಇಲಾಖೆಯನ್ನೇ ದೂರಿದ್ದಾರೆ. ಪ್ರತಿ ವರ್ಷ ಶೇ.6-7% ನಷ್ಟು ಬಿಯರ್‌ ಮಾರಾಟದಲ್ಲಿ ಹೆಚ್ಚಳವಾಗುತ್ತಿತ್ತು. ಆದರೆ ಆಗ ಬಾರ್‌ ಮಾಲೀಕರ ಬೇಡಿಕೆಗನುಗುಣವಾಗಿ ಅಬಕಾರಿ ಇಲಾಖೆಯು ಪೂರೈಕೆ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಅರ್ಧದಷ್ಟು ಮಾತ್ರ ಬಿಯರ್‌ ಪೂರೈಕೆ ಮಾಡುತ್ತಿದ್ದರು. ಸ್ಟಾಕ್‌ ಇದ್ದರೂ ಕೂಡ ಐಎಂಎಲ್‌ (ವೈನ್‌, ಬ್ರಾಂದಿ ಮತ್ತು ವಿಸ್ಕಿ) ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲೆಂಬ ಕಾರಣದಿಂದ ಬಿಯರ್‌ ಪೂರೈಕೆ ಮಾಡುತ್ತಿರಲಿಲ್ಲ. ಹಾಗಾಗಿ ಜನ ಬಿಯರ್‌ ಸಿಗುತ್ತಿಲ್ಲ ಎಂದು ಭಾವಿಸಿದ್ದರಿಂದ ಮಾರಾಟದಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ.

ನಾವು ಮುಖ್ಯಮಂತ್ರಿಯಾದಿಗಾಗಿ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿರಲಿಲ್ಲ. ಐಎಂಎಲ್‌ ಮದ್ಯದ ಹೆಚ್ಚಿನ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಭಾರೀ ಒತ್ತಡ ಇತ್ತು. ಆದರೆ ಹಲವು ಯುವಜನ ಮತ್ತು ಮಹಿಳೆಯರು ಐಎಂಎಲ್‌ ಬದಲಿಗೆ ಬಿಯರ್‌ ಅನ್ನೇ ಇಷ್ಟಪಡುತ್ತಾರೆ. ಆದರೆ ಅಬಕಾರಿ ಇಲಾಖೆಯು ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಕುಸಿತ ಕಾರಣವೇ?

ದೇಶಾದ್ಯಂತ ಆವರಿಸಿರುವ ಆರ್ಥಿಕ ಕುಸಿತ ಎಲ್ಲಾ ಕ್ಷೇತ್ರಗಳ ಮೇಲೂ ಪ್ರಭಾವ ಬೀರುತ್ತಿದೆ. ಮುಖ್ಯವಾಗಿ ಆರ್ಥಿಕ ಕುಸಿತದಿಂದ ಬಹಳಷ್ಟು ಯುವಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಾಗಾಗಿ ಜನಸಾಮಾನ್ಯರು ಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಅದು ಬಿಯರ್‌ ಮಾರಾಟದ ಮೇಲೆಯೂ ಬಿದ್ದಿರಬಹುದು ಎಂಬ ಸಂಶಯ ಸಹ ಇದೆ.

ಬಿಯರ್‌ ಮತ್ತು ಐಎಂಎಲ್‌ ಮದ್ಯದ ನಡುವೆ ಏನು ವ್ಯತ್ಯಾಸ?

ಬಿಯರ್‌‌ನಲ್ಲಿ ಆಲ್ಕೋಹಾಲಿಕ್ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿರುತ್ತದೆ. ಶೇ.4-6% ಮಾತ್ರ ಆಲ್ಕೋ ಹಾಲಿಕ್‌ ಬಿಯರ್‌ನಲ್ಲಿದ್ದರು ವಿಸ್ಕಿಯಲ್ಲಿ ಅದರು ಶೇ.40% ರಷ್ಟಿರುತ್ತದೆ. ಬೆಲೆಯಲ್ಲಿಯೂ ಸಹ ಬಿಯರ್‌ಗಿಂತ ಉಳಿದ ಮದ್ಯದ ಬೆಲೆ ಹೆಚ್ಚಿರುತ್ತದೆ.

ರಾಜ್ಯ ಸರ್ಕಾರದಿಂದ ಟಾರ್ಗೆಟ್‌:

ಈ ವರ್ಷದ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ ರಾಜಸ್ವ ಸಂಗ್ರಹಣೆ ಗುರಿ ಎಂದು ಘೋಷಿಸಿದ್ದರು. ಹಾಗಾಗಿ ಅಬಕಾರಿ ಇಲಾಖೆಯು ಪ್ರತಿ ತಿಂಗಳು, ಪ್ರತಿ ವರ್ಷವೂ ಸಹ ಎಲ್ಲಾ ಮದ್ಯ ಮಾರಾಟ ಮಳಿಗೆಗಳಿಗೆ ಇಂತಿಷ್ಟು ಮದ್ಯ ಮಾರಟ ಮಾಡಲೇಬೇಕೆಂಬ ಟಾರ್ಗೆಟ್‌ ಕೊಡಲಾಗುತ್ತದೆ. ಟಾರ್ಗೆಟ್‌ ಪೂರೈಸಲು ಸತತವಾಗಿ ವಿಫಲವಾದರೆ ಆ ಬಾರ್‌ಗಳ ಲೈಸೈನ್ಸ್‌ ರದ್ದು ಮಾಡುತ್ತೇವೆ ಎಂಬ ಎಚ್ಚರಿಕೆ ಸಹ ನೀಡಲಾಗುತ್ತಿದೆ.

ಹಾಗಾಗಿ ಬಾರ್‌ನ ಮಾಲೀಕರು ಅಕ್ರಮವಾಗಿ ಲೈಸೈನ್ಸ್‌ ಇಲ್ಲದ ಪ್ರತಿ ಊರಿನ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳಿಗೂ ಸರಬರಾಜು ಮಾಡುವ ಮೂಲಕ ಟಾರ್ಗೆಟ್‌ ಪೂರೈಸುತ್ತಿದ್ದಾರೆ. ಅಲ್ಲಿಗೆ ಅಕ್ರಮ ಮದ್ಯ ಮಾರಾಟಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಒಂದು ಕಡೆ ಲಕ್ಷಾಂತರ ಮಹಿಳೆಯರು ಮದ್ಯದಿಂದಾಗಿ ತಮ್ಮ ಕುಟುಂಬವೇ ಸರ್ವನಾಶವಾಗಿದೆ, ಮದ್ಯ ನಿಷೇಧಿಸಿ ಎಂದು ಸತತವಾಗಿ ಹೋರಾಡುತ್ತಿದ್ದರೆ ಸರ್ಕಾರಗಳು ಮಾತ್ರ ಮದ್ಯ ಮಾರಾಟವನ್ನು ಹೆಚ್ಚಿಸುತ್ತಲೇ ಇವೆ. ಹಾಗಾಗಿಯೇ ಬಿಯರ್‌ ಮಾರಾಟ ಇಳಿಕೆಯಾದ ತಕ್ಷಣ ಅಬಕಾರಿ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಮದ್ಯ ನಿಷೇಧ ಆಂದೋಲನದ ಹಕ್ಕೊತ್ತಾಯಗಳು

ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ ನಡೆಸಿರುವ ಮಹಿಳೆಯರು ಯಡಿಯೂರಪ್ಪನವರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಕಾದು ಕುಳಿತರೆ ಸರ್ಕಾರ ಮದ್ಯ ಮಾರಾಟವನ್ನು ಹೆಚ್ಚಿಸಲು ಹೊರಟಿರುವುದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...