Homeಕರ್ನಾಟಕರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು...

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ಭಾರೀ ಇಳಿಕೆ: ಕಾರಣವೇನು? ಇಲ್ಲಿವೆ ಆಘಾತಕಾರಿ ಅಂಶಗಳು…

- Advertisement -
- Advertisement -

ರಾಜ್ಯದಲ್ಲಿ ಬಿಯರ್‌ ಮಾರಾಟದಲ್ಲಿ ತೀವ್ರ ಇಳಿಕೆಯಾಗಿದ್ದು ಈ ಕುರಿತು ಕಾರಣಗಳನ್ನು ನೀಡುವಂತೆ ಅಬಕಾರಿ ಆಯುಕ್ತರು ಎಲ್ಲಾ ಜಿಲ್ಲೆಗಳ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಬಾರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕರುಣಾಕರ ರೆಡ್ಡಿಯವರು ಅಬಕಾರಿ ಇಲಾಖೆಯನ್ನೇ ದೂರಿದ್ದಾರೆ. ಪ್ರತಿ ವರ್ಷ ಶೇ.6-7% ನಷ್ಟು ಬಿಯರ್‌ ಮಾರಾಟದಲ್ಲಿ ಹೆಚ್ಚಳವಾಗುತ್ತಿತ್ತು. ಆದರೆ ಆಗ ಬಾರ್‌ ಮಾಲೀಕರ ಬೇಡಿಕೆಗನುಗುಣವಾಗಿ ಅಬಕಾರಿ ಇಲಾಖೆಯು ಪೂರೈಕೆ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಅರ್ಧದಷ್ಟು ಮಾತ್ರ ಬಿಯರ್‌ ಪೂರೈಕೆ ಮಾಡುತ್ತಿದ್ದರು. ಸ್ಟಾಕ್‌ ಇದ್ದರೂ ಕೂಡ ಐಎಂಎಲ್‌ (ವೈನ್‌, ಬ್ರಾಂದಿ ಮತ್ತು ವಿಸ್ಕಿ) ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಲೆಂಬ ಕಾರಣದಿಂದ ಬಿಯರ್‌ ಪೂರೈಕೆ ಮಾಡುತ್ತಿರಲಿಲ್ಲ. ಹಾಗಾಗಿ ಜನ ಬಿಯರ್‌ ಸಿಗುತ್ತಿಲ್ಲ ಎಂದು ಭಾವಿಸಿದ್ದರಿಂದ ಮಾರಾಟದಲ್ಲಿ ಇಳಿಕೆಯಾಗಿದೆ ಎಂದಿದ್ದಾರೆ.

ನಾವು ಮುಖ್ಯಮಂತ್ರಿಯಾದಿಗಾಗಿ ಎಲ್ಲಾ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಪ್ರಯೋಜನವಾಗಿರಲಿಲ್ಲ. ಐಎಂಎಲ್‌ ಮದ್ಯದ ಹೆಚ್ಚಿನ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಭಾರೀ ಒತ್ತಡ ಇತ್ತು. ಆದರೆ ಹಲವು ಯುವಜನ ಮತ್ತು ಮಹಿಳೆಯರು ಐಎಂಎಲ್‌ ಬದಲಿಗೆ ಬಿಯರ್‌ ಅನ್ನೇ ಇಷ್ಟಪಡುತ್ತಾರೆ. ಆದರೆ ಅಬಕಾರಿ ಇಲಾಖೆಯು ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದರಿಂದ ಈ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಕುಸಿತ ಕಾರಣವೇ?

ದೇಶಾದ್ಯಂತ ಆವರಿಸಿರುವ ಆರ್ಥಿಕ ಕುಸಿತ ಎಲ್ಲಾ ಕ್ಷೇತ್ರಗಳ ಮೇಲೂ ಪ್ರಭಾವ ಬೀರುತ್ತಿದೆ. ಮುಖ್ಯವಾಗಿ ಆರ್ಥಿಕ ಕುಸಿತದಿಂದ ಬಹಳಷ್ಟು ಯುವಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಾಗಾಗಿ ಜನಸಾಮಾನ್ಯರು ಕೊಳ್ಳುವುದನ್ನು ಕಡಿಮೆ ಮಾಡಿದ್ದಾರೆ. ಅದು ಬಿಯರ್‌ ಮಾರಾಟದ ಮೇಲೆಯೂ ಬಿದ್ದಿರಬಹುದು ಎಂಬ ಸಂಶಯ ಸಹ ಇದೆ.

ಬಿಯರ್‌ ಮತ್ತು ಐಎಂಎಲ್‌ ಮದ್ಯದ ನಡುವೆ ಏನು ವ್ಯತ್ಯಾಸ?

ಬಿಯರ್‌‌ನಲ್ಲಿ ಆಲ್ಕೋಹಾಲಿಕ್ ಪ್ರಮಾಣ ತೀರಾ ಕಡಿಮೆ ಪ್ರಮಾಣದಲ್ಲಿರುತ್ತದೆ. ಶೇ.4-6% ಮಾತ್ರ ಆಲ್ಕೋ ಹಾಲಿಕ್‌ ಬಿಯರ್‌ನಲ್ಲಿದ್ದರು ವಿಸ್ಕಿಯಲ್ಲಿ ಅದರು ಶೇ.40% ರಷ್ಟಿರುತ್ತದೆ. ಬೆಲೆಯಲ್ಲಿಯೂ ಸಹ ಬಿಯರ್‌ಗಿಂತ ಉಳಿದ ಮದ್ಯದ ಬೆಲೆ ಹೆಚ್ಚಿರುತ್ತದೆ.

ರಾಜ್ಯ ಸರ್ಕಾರದಿಂದ ಟಾರ್ಗೆಟ್‌:

ಈ ವರ್ಷದ ಬಜೆಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ ರಾಜಸ್ವ ಸಂಗ್ರಹಣೆ ಗುರಿ ಎಂದು ಘೋಷಿಸಿದ್ದರು. ಹಾಗಾಗಿ ಅಬಕಾರಿ ಇಲಾಖೆಯು ಪ್ರತಿ ತಿಂಗಳು, ಪ್ರತಿ ವರ್ಷವೂ ಸಹ ಎಲ್ಲಾ ಮದ್ಯ ಮಾರಾಟ ಮಳಿಗೆಗಳಿಗೆ ಇಂತಿಷ್ಟು ಮದ್ಯ ಮಾರಟ ಮಾಡಲೇಬೇಕೆಂಬ ಟಾರ್ಗೆಟ್‌ ಕೊಡಲಾಗುತ್ತದೆ. ಟಾರ್ಗೆಟ್‌ ಪೂರೈಸಲು ಸತತವಾಗಿ ವಿಫಲವಾದರೆ ಆ ಬಾರ್‌ಗಳ ಲೈಸೈನ್ಸ್‌ ರದ್ದು ಮಾಡುತ್ತೇವೆ ಎಂಬ ಎಚ್ಚರಿಕೆ ಸಹ ನೀಡಲಾಗುತ್ತಿದೆ.

ಹಾಗಾಗಿ ಬಾರ್‌ನ ಮಾಲೀಕರು ಅಕ್ರಮವಾಗಿ ಲೈಸೈನ್ಸ್‌ ಇಲ್ಲದ ಪ್ರತಿ ಊರಿನ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳಿಗೂ ಸರಬರಾಜು ಮಾಡುವ ಮೂಲಕ ಟಾರ್ಗೆಟ್‌ ಪೂರೈಸುತ್ತಿದ್ದಾರೆ. ಅಲ್ಲಿಗೆ ಅಕ್ರಮ ಮದ್ಯ ಮಾರಾಟಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಒಂದು ಕಡೆ ಲಕ್ಷಾಂತರ ಮಹಿಳೆಯರು ಮದ್ಯದಿಂದಾಗಿ ತಮ್ಮ ಕುಟುಂಬವೇ ಸರ್ವನಾಶವಾಗಿದೆ, ಮದ್ಯ ನಿಷೇಧಿಸಿ ಎಂದು ಸತತವಾಗಿ ಹೋರಾಡುತ್ತಿದ್ದರೆ ಸರ್ಕಾರಗಳು ಮಾತ್ರ ಮದ್ಯ ಮಾರಾಟವನ್ನು ಹೆಚ್ಚಿಸುತ್ತಲೇ ಇವೆ. ಹಾಗಾಗಿಯೇ ಬಿಯರ್‌ ಮಾರಾಟ ಇಳಿಕೆಯಾದ ತಕ್ಷಣ ಅಬಕಾರಿ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದೆ.

ಮದ್ಯ ನಿಷೇಧ ಆಂದೋಲನದ ಹಕ್ಕೊತ್ತಾಯಗಳು

ಸಂವಿಧಾನದ 73ನೇ ತಿದ್ದುಪಡಿಯ ಆಶಯದಂತೆ ಅನುಷ್ಠಾನಗೊಳಿಸುವುದು (ಗ್ರಾಮಗಳ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನ ಗ್ರಾಮ ಸಭೆಗೆ ನೀಡುವುದು) ಉದಾ: ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯ ಮೂಲಕ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳು ಇರಬಾರದೆಂದು ನಿರ್ಧಾರ ತೆಗೆದುಕೊಳ್ಳಬಹುದು. (ಕಾನೂನು ಬಾಹಿರ, ಖಾಸಗಿ ಅಥವಾ ಸರಕಾರಿ ಮಳಿಗೆಗಳಾಗಿರಬಹುದು) ಈಗಾಗಲೇ ಗ್ರಾಮಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಗ್ರಾಮ ಪಂಚಾಯತಿಗಳಲ್ಲಿ ತಕ್ಷಣ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಬೇಕು.

ರಾಜ್ಯಗಳಲ್ಲಿ ಮದ್ಯ ಸೇವನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಅನುಚ್ಛೇದ 47ರಲ್ಲಿ ರಾಜ್ಯಗಳಿಗೆ ನೀಡಲಾದ ನಿರ್ದೇಶನದಂತೆ “ಮದ್ಯ ಮುಕ್ತ ಕರ್ನಾಟಕ ನೀತಿಯತ್ತ” ಸಾಗುವ ಸಲುವಾಗಿ ಮೂರು ತಿಂಗಳೊಳಗೆ ಸಮಿತಿ ರಚಿಸಿ ಸರಕಾರದ ನೀತಿಯನ್ನು ಜಾರಿಗೊಳಿಸಬೇಕು.

ಈ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ಮದ್ಯ ನಿಷೇಧ ಆಂದೋಲನದ ಸಂಘಟಕರೊಂದಿಗೆ ಕೂಡಲೇ ಸಭೆ ಕರೆಯಬೇಕು.

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ ನಡೆಸಿರುವ ಮಹಿಳೆಯರು ಯಡಿಯೂರಪ್ಪನವರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಕಾದು ಕುಳಿತರೆ ಸರ್ಕಾರ ಮದ್ಯ ಮಾರಾಟವನ್ನು ಹೆಚ್ಚಿಸಲು ಹೊರಟಿರುವುದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...