Homeಮುಖಪುಟದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7...

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

- Advertisement -
- Advertisement -

ಜೈಪುರದ ಬಳೆ ಕಾರ್ಖಾನೆಯಲ್ಲಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸಲಾಗಿದ್ದ ಏಳು ಮಕ್ಕಳು ಸೋಮವಾರ (ಅ.20) ರಾತ್ರಿ ತಪ್ಪಿಸಿಕೊಂಡು ಸ್ಮಶಾನದಲ್ಲಿ ಅಡಗಿಕೊಂಡಿದ್ದರು, ನಂತರ ಸ್ಥಳೀಯ ನಿವಾಸಿಗಳು ಅವರನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಭಯಭೀತರಾಗಿ, ಅಳುತ್ತಾ ಮಕ್ಕಳು ಸ್ಮಶಾನದಲ್ಲಿ ಇದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಭಟ್ಟಾ ಬಸ್ತಿ ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯ ತಂಡವು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ರಕ್ಷಿಸಿದೆ.

“ಈ ಮಕ್ಕಳನ್ನು ಎರಡು ತಿಂಗಳ ಹಿಂದೆ ಬಿಹಾರದ ಹಳ್ಳಿಗಳಿಂದ ಪ್ರವಾಸದ ನೆಪದಲ್ಲಿ ಜೈಪುರಕ್ಕೆ ಕರೆತರಲಾಗಿತ್ತು. ನಂತರ ಜೈಪುರದ ಬಳೆ ಕಾರ್ಖಾನೆಯಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನಕ್ಕೆ 15-18 ಗಂಟೆಗಳ ಕಾಲ ಕೆಲಸ ಮಾಡುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಕಿರುಕುಳ ತಡೆಯಲಾಗದೆ ಸೋಮವಾರ ರಾತ್ರಿ ಮಕ್ಕಳು ಕಾರ್ಖಾನೆಯಿಂದ ತಪ್ಪಿಸಿಕೊಂಡಿದ್ದರು. ಆದರೆ, ಭಟ್ಟಾ ಬಸ್ತಿಯ ಜನದಟ್ಟಣೆಯ ಪ್ರದೇಶಗಳಲ್ಲಿ ದಾರಿ ತಪ್ಪಿ ಸ್ಮಶಾನ ತಲುಪಿದ್ದರು. ಅಲ್ಲಿ ಅಡಗಿಕೊಂಡಿದ್ದರು” ಎಂದು ಭಟ್ಟಾ ಬಸ್ತಿ ಪೊಲೀಸ್ ಠಾಣೆಯ ಅಧಿಕಾರಿ ದೀಪಕ್ ತ್ಯಾಗಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರಂಭದಲ್ಲಿ ಮಕ್ಕಳು ಮಾತನಾಡಲು ನಿರಾಕರಿಸಿದ್ದರು. ನಂತರ ಸಂಸದ್ ಮಿಯಾ ಎಂಬಾತ ಅವರನ್ನು ಜೈಪುರಕ್ಕೆ ಕರೆತಂದಿರುವುದಾಗಿ ತಿಳಿಸಿದರು ಎಂದು ಪೊಲೀಸರು ವಿವರಿಸಿದ್ದು, ಆರೋಪಿ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ಕಾರ್ಖಾನೆಯಲ್ಲಿ ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ದಿನಕ್ಕೆ ಒಂದು ಬಾರಿ ಮಾತ್ರ ಊಟ ನೀಡುತ್ತಿದ್ದರು. 18 ಗಂಟೆಗಳ ಕಾಲ ಕೆಲಸ ಮಾಡುವಾಗ ಅನಾರೋಗ್ಯಕ್ಕೆ ಒಳಗಾದರೆ ಹೊಡೆಯುತ್ತಿದ್ದರು ಎಂದು ಹೇಳಿದ್ದಾರೆ.

ಜೈಪುರದ ಬಳೆ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರ ಸಮಸ್ಯೆ ದಶಕಗಳಷ್ಟು ಹಳೆಯದಾಗಿದ್ದು, ಕಳೆದ ಕೆಲವು ವರ್ಷಗಳಿಂದ ಅಂತಹ ಕಾರ್ಖಾನೆಗಳ ಮೇಲೆ ಹಲವಾರು ದಾಳಿಗಳು ನಡೆದಿವೆ.

ಪೊಲೀಸರ ಪ್ರಕಾರ, ಮಕ್ಕಳ ಕೈಗಳು ಗಾಜಿನ ಬಳೆಗಳ ಸಂಕೀರ್ಣವಾದ ಕೆಲಸ ಮಾಡುವಷ್ಟು ಚಿಕ್ಕದಾಗಿರುವುದರಿಂದ ಮತ್ತು ವಯಸ್ಕರಿಗೆ ನೀಡುವ ಅರ್ಧದಷ್ಟು ವೇತನಕ್ಕೆ ಅವರನ್ನು ಕೆಲಸ ಮಾಡಿಸಬಹುದು ಎಂಬ ಕಾರಣದಿಂದಾಗಿ ಕಾರ್ಖಾನೆಗಳ ಮಾಲೀಕರು ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...