Homeಮುಖಪುಟದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7...

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

- Advertisement -
- Advertisement -

ಜೈಪುರದ ಬಳೆ ಕಾರ್ಖಾನೆಯಲ್ಲಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸಲಾಗಿದ್ದ ಏಳು ಮಕ್ಕಳು ಸೋಮವಾರ (ಅ.20) ರಾತ್ರಿ ತಪ್ಪಿಸಿಕೊಂಡು ಸ್ಮಶಾನದಲ್ಲಿ ಅಡಗಿಕೊಂಡಿದ್ದರು, ನಂತರ ಸ್ಥಳೀಯ ನಿವಾಸಿಗಳು ಅವರನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಭಯಭೀತರಾಗಿ, ಅಳುತ್ತಾ ಮಕ್ಕಳು ಸ್ಮಶಾನದಲ್ಲಿ ಇದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಭಟ್ಟಾ ಬಸ್ತಿ ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯ ತಂಡವು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ರಕ್ಷಿಸಿದೆ.

“ಈ ಮಕ್ಕಳನ್ನು ಎರಡು ತಿಂಗಳ ಹಿಂದೆ ಬಿಹಾರದ ಹಳ್ಳಿಗಳಿಂದ ಪ್ರವಾಸದ ನೆಪದಲ್ಲಿ ಜೈಪುರಕ್ಕೆ ಕರೆತರಲಾಗಿತ್ತು. ನಂತರ ಜೈಪುರದ ಬಳೆ ಕಾರ್ಖಾನೆಯಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನಕ್ಕೆ 15-18 ಗಂಟೆಗಳ ಕಾಲ ಕೆಲಸ ಮಾಡುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಕಿರುಕುಳ ತಡೆಯಲಾಗದೆ ಸೋಮವಾರ ರಾತ್ರಿ ಮಕ್ಕಳು ಕಾರ್ಖಾನೆಯಿಂದ ತಪ್ಪಿಸಿಕೊಂಡಿದ್ದರು. ಆದರೆ, ಭಟ್ಟಾ ಬಸ್ತಿಯ ಜನದಟ್ಟಣೆಯ ಪ್ರದೇಶಗಳಲ್ಲಿ ದಾರಿ ತಪ್ಪಿ ಸ್ಮಶಾನ ತಲುಪಿದ್ದರು. ಅಲ್ಲಿ ಅಡಗಿಕೊಂಡಿದ್ದರು” ಎಂದು ಭಟ್ಟಾ ಬಸ್ತಿ ಪೊಲೀಸ್ ಠಾಣೆಯ ಅಧಿಕಾರಿ ದೀಪಕ್ ತ್ಯಾಗಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರಂಭದಲ್ಲಿ ಮಕ್ಕಳು ಮಾತನಾಡಲು ನಿರಾಕರಿಸಿದ್ದರು. ನಂತರ ಸಂಸದ್ ಮಿಯಾ ಎಂಬಾತ ಅವರನ್ನು ಜೈಪುರಕ್ಕೆ ಕರೆತಂದಿರುವುದಾಗಿ ತಿಳಿಸಿದರು ಎಂದು ಪೊಲೀಸರು ವಿವರಿಸಿದ್ದು, ಆರೋಪಿ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ಕಾರ್ಖಾನೆಯಲ್ಲಿ ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ದಿನಕ್ಕೆ ಒಂದು ಬಾರಿ ಮಾತ್ರ ಊಟ ನೀಡುತ್ತಿದ್ದರು. 18 ಗಂಟೆಗಳ ಕಾಲ ಕೆಲಸ ಮಾಡುವಾಗ ಅನಾರೋಗ್ಯಕ್ಕೆ ಒಳಗಾದರೆ ಹೊಡೆಯುತ್ತಿದ್ದರು ಎಂದು ಹೇಳಿದ್ದಾರೆ.

ಜೈಪುರದ ಬಳೆ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರ ಸಮಸ್ಯೆ ದಶಕಗಳಷ್ಟು ಹಳೆಯದಾಗಿದ್ದು, ಕಳೆದ ಕೆಲವು ವರ್ಷಗಳಿಂದ ಅಂತಹ ಕಾರ್ಖಾನೆಗಳ ಮೇಲೆ ಹಲವಾರು ದಾಳಿಗಳು ನಡೆದಿವೆ.

ಪೊಲೀಸರ ಪ್ರಕಾರ, ಮಕ್ಕಳ ಕೈಗಳು ಗಾಜಿನ ಬಳೆಗಳ ಸಂಕೀರ್ಣವಾದ ಕೆಲಸ ಮಾಡುವಷ್ಟು ಚಿಕ್ಕದಾಗಿರುವುದರಿಂದ ಮತ್ತು ವಯಸ್ಕರಿಗೆ ನೀಡುವ ಅರ್ಧದಷ್ಟು ವೇತನಕ್ಕೆ ಅವರನ್ನು ಕೆಲಸ ಮಾಡಿಸಬಹುದು ಎಂಬ ಕಾರಣದಿಂದಾಗಿ ಕಾರ್ಖಾನೆಗಳ ಮಾಲೀಕರು ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...