Homeಮುಖಪುಟದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7...

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

- Advertisement -
- Advertisement -

ಜೈಪುರದ ಬಳೆ ಕಾರ್ಖಾನೆಯಲ್ಲಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸಲಾಗಿದ್ದ ಏಳು ಮಕ್ಕಳು ಸೋಮವಾರ (ಅ.20) ರಾತ್ರಿ ತಪ್ಪಿಸಿಕೊಂಡು ಸ್ಮಶಾನದಲ್ಲಿ ಅಡಗಿಕೊಂಡಿದ್ದರು, ನಂತರ ಸ್ಥಳೀಯ ನಿವಾಸಿಗಳು ಅವರನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಭಯಭೀತರಾಗಿ, ಅಳುತ್ತಾ ಮಕ್ಕಳು ಸ್ಮಶಾನದಲ್ಲಿ ಇದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಭಟ್ಟಾ ಬಸ್ತಿ ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯ ತಂಡವು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ರಕ್ಷಿಸಿದೆ.

“ಈ ಮಕ್ಕಳನ್ನು ಎರಡು ತಿಂಗಳ ಹಿಂದೆ ಬಿಹಾರದ ಹಳ್ಳಿಗಳಿಂದ ಪ್ರವಾಸದ ನೆಪದಲ್ಲಿ ಜೈಪುರಕ್ಕೆ ಕರೆತರಲಾಗಿತ್ತು. ನಂತರ ಜೈಪುರದ ಬಳೆ ಕಾರ್ಖಾನೆಯಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನಕ್ಕೆ 15-18 ಗಂಟೆಗಳ ಕಾಲ ಕೆಲಸ ಮಾಡುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಕಿರುಕುಳ ತಡೆಯಲಾಗದೆ ಸೋಮವಾರ ರಾತ್ರಿ ಮಕ್ಕಳು ಕಾರ್ಖಾನೆಯಿಂದ ತಪ್ಪಿಸಿಕೊಂಡಿದ್ದರು. ಆದರೆ, ಭಟ್ಟಾ ಬಸ್ತಿಯ ಜನದಟ್ಟಣೆಯ ಪ್ರದೇಶಗಳಲ್ಲಿ ದಾರಿ ತಪ್ಪಿ ಸ್ಮಶಾನ ತಲುಪಿದ್ದರು. ಅಲ್ಲಿ ಅಡಗಿಕೊಂಡಿದ್ದರು” ಎಂದು ಭಟ್ಟಾ ಬಸ್ತಿ ಪೊಲೀಸ್ ಠಾಣೆಯ ಅಧಿಕಾರಿ ದೀಪಕ್ ತ್ಯಾಗಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರಂಭದಲ್ಲಿ ಮಕ್ಕಳು ಮಾತನಾಡಲು ನಿರಾಕರಿಸಿದ್ದರು. ನಂತರ ಸಂಸದ್ ಮಿಯಾ ಎಂಬಾತ ಅವರನ್ನು ಜೈಪುರಕ್ಕೆ ಕರೆತಂದಿರುವುದಾಗಿ ತಿಳಿಸಿದರು ಎಂದು ಪೊಲೀಸರು ವಿವರಿಸಿದ್ದು, ಆರೋಪಿ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.

ಕಾರ್ಖಾನೆಯಲ್ಲಿ ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಮಕ್ಕಳು ಆರೋಪಿಸಿದ್ದಾರೆ. ದಿನಕ್ಕೆ ಒಂದು ಬಾರಿ ಮಾತ್ರ ಊಟ ನೀಡುತ್ತಿದ್ದರು. 18 ಗಂಟೆಗಳ ಕಾಲ ಕೆಲಸ ಮಾಡುವಾಗ ಅನಾರೋಗ್ಯಕ್ಕೆ ಒಳಗಾದರೆ ಹೊಡೆಯುತ್ತಿದ್ದರು ಎಂದು ಹೇಳಿದ್ದಾರೆ.

ಜೈಪುರದ ಬಳೆ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರ ಸಮಸ್ಯೆ ದಶಕಗಳಷ್ಟು ಹಳೆಯದಾಗಿದ್ದು, ಕಳೆದ ಕೆಲವು ವರ್ಷಗಳಿಂದ ಅಂತಹ ಕಾರ್ಖಾನೆಗಳ ಮೇಲೆ ಹಲವಾರು ದಾಳಿಗಳು ನಡೆದಿವೆ.

ಪೊಲೀಸರ ಪ್ರಕಾರ, ಮಕ್ಕಳ ಕೈಗಳು ಗಾಜಿನ ಬಳೆಗಳ ಸಂಕೀರ್ಣವಾದ ಕೆಲಸ ಮಾಡುವಷ್ಟು ಚಿಕ್ಕದಾಗಿರುವುದರಿಂದ ಮತ್ತು ವಯಸ್ಕರಿಗೆ ನೀಡುವ ಅರ್ಧದಷ್ಟು ವೇತನಕ್ಕೆ ಅವರನ್ನು ಕೆಲಸ ಮಾಡಿಸಬಹುದು ಎಂಬ ಕಾರಣದಿಂದಾಗಿ ಕಾರ್ಖಾನೆಗಳ ಮಾಲೀಕರು ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ವಸಾಹತುಶಾಹಿಗಿಂತ ‘ರಾಜಕೀಯ ಇಸ್ಲಾಂ’ ಸನಾತನಕ್ಕೆ ದೊಡ್ಡ ಹೊಡೆತ ನೀಡಿದೆ: ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...