Homeಮುಖಪುಟಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

- Advertisement -
- Advertisement -

ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ.

ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಸಾಕೇತ್ ಗೋಖಲೆ ನಡುವಿನ ಸಂಭಾಷಣೆಯಲ್ಲಿ ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ಸಾಕೇತ್ ಗೋಖಲೆ ವಿವರಿಸಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಡಳಿತದಲ್ಲಿ ವಿಪಕ್ಷಗಳ ನಾಯಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ನೀನು ಆಡಳಿತ ಪಕ್ಷದೊಂದಿಗೆ ಸೇರು. ಮೂರು ದಿನಗಳಲ್ಲಿ ಜಾಮೀನು ಸಿಗಲಿದೆ, ಹಣವೂ ದೊರೆಯಲಿದೆ. ನಿನ್ನನ್ನು ಪಕ್ಷದ ರಾಷ್ಟ್ರೀಯ ವಕ್ತಾರನನ್ನಾಗಿ ಮಾಡಲಿದ್ದಾರೆ ಎಂದು ಸ್ವತಃ ಗುಜರಾತ್ ಪೊಲೀಸರೇ ಓರ್ವ ವಕೀಲನೊಂದಿಗೆ ಆಗಮಿಸಿ ನನಗೆ ಜೈಲಿನಲ್ಲಿ ಒತ್ತಡ ಹೇರುತ್ತಿದ್ದರು. ನಾನು ನಿರಾಕರಿಸಿದಾಗ ಹೊಡೆದು ಚಿತ್ರಹಿಂಸೆ ನೀಡಿದ್ದರು. ಇದು ನನ್ನೊಬ್ಬನ ಕುರಿತಾದುದ್ದಲ್ಲ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

“ಇಂತಹ ಹಿಂಸೆಗಳು ನನಗೆ ಮಾತ್ರವಲ್ಲ ಅಥವಾ ನಾನೊಂದು ನಿದರ್ಶನವೂ ಅಲ್ಲ. ಇದು ಭಾರತೀಯ ರಾಜಕೀಯದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರಿದ ಲಕ್ಷಣವನ್ನು ಎತ್ತಿ ತೋರಿಸುತ್ತವೆ” ಎಂದಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಕ್ತಿಗಳನ್ನು ಬಳಸಿಕೊಂಡು ಮೋದಿ ಮತ್ತು ಬಿಜೆಪಿ ಪ್ರತಿಪಕ್ಷಗಳಿಗೆ ಎಷ್ಟರಮಟ್ಟಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುವುದನ್ನು ಭಾರತದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿಯವರ ದಾಳಿಗೆ ಒಳಗಾದ ನಮ್ಮ ಪ್ರಜಾಪ್ರಭುತ್ವಕ್ಕಾಗಿ ನಾವು ಈಗಲೇ ಎದ್ದು ನಿಲ್ಲದಿದ್ದರೆ ನಮ್ಮ ಮತ್ತು ಟಿನ್‌ಪಾಟ್ ಸರ್ವಾಧಿಕಾರದ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಕ್ರೌಡ್ ಫಂಡ್ ಮಾಡಿದ ಹಣವನ್ನು ವೈಯಕ್ತಿಕ ಬಳಕೆಗಾಗಿ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಸಾಕೇತ್ ಗೋಖಲೆ ಅವರನ್ನು ಬಂಧಿಸಿ, ಜೈಲಿನಲ್ಲಿರಿಸಲಾಗಿತ್ತು.

ಇದನ್ನೂ ಓದಿ : ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...