Homeಮುಖಪುಟಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

- Advertisement -
- Advertisement -

ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ.

ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಸಾಕೇತ್ ಗೋಖಲೆ ನಡುವಿನ ಸಂಭಾಷಣೆಯಲ್ಲಿ ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ಸಾಕೇತ್ ಗೋಖಲೆ ವಿವರಿಸಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಡಳಿತದಲ್ಲಿ ವಿಪಕ್ಷಗಳ ನಾಯಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ನೀನು ಆಡಳಿತ ಪಕ್ಷದೊಂದಿಗೆ ಸೇರು. ಮೂರು ದಿನಗಳಲ್ಲಿ ಜಾಮೀನು ಸಿಗಲಿದೆ, ಹಣವೂ ದೊರೆಯಲಿದೆ. ನಿನ್ನನ್ನು ಪಕ್ಷದ ರಾಷ್ಟ್ರೀಯ ವಕ್ತಾರನನ್ನಾಗಿ ಮಾಡಲಿದ್ದಾರೆ ಎಂದು ಸ್ವತಃ ಗುಜರಾತ್ ಪೊಲೀಸರೇ ಓರ್ವ ವಕೀಲನೊಂದಿಗೆ ಆಗಮಿಸಿ ನನಗೆ ಜೈಲಿನಲ್ಲಿ ಒತ್ತಡ ಹೇರುತ್ತಿದ್ದರು. ನಾನು ನಿರಾಕರಿಸಿದಾಗ ಹೊಡೆದು ಚಿತ್ರಹಿಂಸೆ ನೀಡಿದ್ದರು. ಇದು ನನ್ನೊಬ್ಬನ ಕುರಿತಾದುದ್ದಲ್ಲ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

“ಇಂತಹ ಹಿಂಸೆಗಳು ನನಗೆ ಮಾತ್ರವಲ್ಲ ಅಥವಾ ನಾನೊಂದು ನಿದರ್ಶನವೂ ಅಲ್ಲ. ಇದು ಭಾರತೀಯ ರಾಜಕೀಯದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರಿದ ಲಕ್ಷಣವನ್ನು ಎತ್ತಿ ತೋರಿಸುತ್ತವೆ” ಎಂದಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಕ್ತಿಗಳನ್ನು ಬಳಸಿಕೊಂಡು ಮೋದಿ ಮತ್ತು ಬಿಜೆಪಿ ಪ್ರತಿಪಕ್ಷಗಳಿಗೆ ಎಷ್ಟರಮಟ್ಟಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುವುದನ್ನು ಭಾರತದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿಯವರ ದಾಳಿಗೆ ಒಳಗಾದ ನಮ್ಮ ಪ್ರಜಾಪ್ರಭುತ್ವಕ್ಕಾಗಿ ನಾವು ಈಗಲೇ ಎದ್ದು ನಿಲ್ಲದಿದ್ದರೆ ನಮ್ಮ ಮತ್ತು ಟಿನ್‌ಪಾಟ್ ಸರ್ವಾಧಿಕಾರದ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಕ್ರೌಡ್ ಫಂಡ್ ಮಾಡಿದ ಹಣವನ್ನು ವೈಯಕ್ತಿಕ ಬಳಕೆಗಾಗಿ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಸಾಕೇತ್ ಗೋಖಲೆ ಅವರನ್ನು ಬಂಧಿಸಿ, ಜೈಲಿನಲ್ಲಿರಿಸಲಾಗಿತ್ತು.

ಇದನ್ನೂ ಓದಿ : ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...