Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

- Advertisement -
- Advertisement -

ದೇಶದಲ್ಲಿ ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪುಗಳ ದೌರ್ಜನ್ಯ ಮುಂದುವರಿದಿದೆ. ಮತಾಂತರದ ಆರೋಪದಲ್ಲಿ ಕ್ರಿಶ್ಚಿಯನ್‌ ಪಾದ್ರಿಗಳು, ಪ್ರಾರ್ಥನಾ ಸಭೆಗಳ ಮೇಲೆ ದಾಳಿಗಳು, ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ದೇಶದ ವಿವಿಧೆಡೆ ಈ ಮೊದಲು ನಡೆದಿತ್ತು. ಇಂತದ್ದೇ ಸಾಮ್ಯತೆಯ ಘಟನೆ ರಾಮಮಂದಿರದ ಉದ್ಘಾಟನೆಯ ಹೊಸ್ತಿಲಲ್ಲಿ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರತಿನಿಧಿಸುವ ಕುಂಕುರಿ  ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್‌ ಸಮುದಾಯದ ಜನರ ಗುಂಪಿನ ಮೇಲೆ ಜನವರಿ 21ರಂದು ಹಿಂದುತ್ವದ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸ್ಥಳೀಯರಾದ ಶಿವಪ್ರಸಾದ್ ಮೆಹ್ತೋ, ಪಾದ್ರಿ ಮಹಾನಂದ ಎಫ್‌ಐಆರ್‌ ದಾಖಲಿಸಿದ್ದು, ದುಲ್ದುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಸುದೋಪುರ ಗ್ರಾಮದ ಶಿವನ ಮನೆಗೆ ಊಟಕ್ಕೆಂದು ತೆರಳಿದ್ದೆವು. ಊಟ ಮುಗಿಸಿ ವಾಪಸ್ಸು ಬರುವಾಗ ನಮ್ಮ ಮೇಲೆ ಹಿಂದುತ್ವವಾದಿ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಜನರಿಗೆ ಗ್ರಾಮಕ್ಕೆ ಮತ್ತೆ ಭೇಟಿ ನೀಡದಂತೆ ಬೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಕ್ರಿಶ್ಚಿಯನ್‌ ಸಮುದಾಯ ಜನರ ತಂಡದಲ್ಲಿದ್ದ ಕಿಶೋರ್, ನಾವು ಶಿವ ಅವರ ಮನೆಯಿಂದ ವಾಪಾಸ್ಸು ಬರುವಾಗ ಅವರು ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ನಮ್ಮನ್ನು ತಡೆದಿದ್ದಾರೆ. ಅದೇ ಜನರು ರಾಮ ಮಂದಿರದ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಉತ್ತರ ಭಾರತದ ವಿವಿಧ ಭಾಗಗಳಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ನಡೆದಿತ್ತು. ಅವರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಈ ವೇಳೆ ತಡೆಯಲು ಪ್ರಯತ್ನಿಸಿದ ಮಹಿಳೆಯರನ್ನು ರಸ್ತೆಯಲ್ಲಿ ಎಳೆದಾಡಿ ದೌರ್ನಜ್ಯ ನಡೆಸಿದ್ದಾರೆ. ಘಟನೆ ವೇಳೆ ಪಾದ್ರಿ ಮಹಾನಂದ ಪ್ರಜ್ಞೆ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಸ್ಥಳೀಯ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿಂದ ಅವರನ್ನು ಕುಂಕೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾದ ನರೇಶ್ ಕುಮಾರ್ ಯಾದವ್ ಮತ್ತು ಇತರರು ಶಿವ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಪಾದ್ರಿ ಮತ್ತು ಇತರರನ್ನು ಗ್ರಾಮಕ್ಕೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದೇವೆ ಈ ವೇಳೆ ಅವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ವರದಿಯ ಪ್ರಕಾರ 2023ರಲ್ಲಿ 23 ರಾಜ್ಯಗಳಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರ ಸಂಭವಿಸಿದೆ. ಉತ್ತರ ಪ್ರದೇಶವೊಂದರಲ್ಲೇ 155 ಘಟನೆಗಳು ನಡೆದಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದಲ್ಲಿ ಉತ್ತರಪ್ರದೇಶ ಮುಂಚೂಣಿಯಲ್ಲಿದೆ. ಛತ್ತೀಸ್‌ಗಢದಲ್ಲಿ 84 ಘಟನೆಗಳು ನಡೆದಿದೆ. ಕಳೆದವಾರ  ಜಶ್ಪುರ್ ಪ್ರದೇಶದಲ್ಲಿ ಹಿಂದುತ್ವದ ಗುಂಪು ಐವರು ಪಾದ್ರಿಗಳನ್ನು ಥಳಿಸಿದ್ದರು.

ಜನವರಿ 21ರಂದು ಕುಂದ್ರಾ ಗ್ರಾಮದಲ್ಲಿ ಹಿಂದುತ್ವವಾದಿಗಳ ಗುಂಪೊಂದು ಸ್ಥಳೀಯ ಪಾದ್ರಿಯ ಮನೆಗೆ ನುಗ್ಗಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಮನೆಯಲ್ಲಿ ಕೇಸರಿ ಧ್ವಜವನ್ನು ಹಾರಾಟ ಮಾಡಿದ್ದಾರೆ ಎಂದು ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂ ಹೇಳಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಳೆದ ಭಾನುವಾರದಂದು ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿದ ದುಷ್ಕರ್ಮಿಗಳ ಗುಂಪು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಇದನ್ನು ಓದಿ: ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...