Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

- Advertisement -
- Advertisement -

ದೇಶದಲ್ಲಿ ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪುಗಳ ದೌರ್ಜನ್ಯ ಮುಂದುವರಿದಿದೆ. ಮತಾಂತರದ ಆರೋಪದಲ್ಲಿ ಕ್ರಿಶ್ಚಿಯನ್‌ ಪಾದ್ರಿಗಳು, ಪ್ರಾರ್ಥನಾ ಸಭೆಗಳ ಮೇಲೆ ದಾಳಿಗಳು, ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ದೇಶದ ವಿವಿಧೆಡೆ ಈ ಮೊದಲು ನಡೆದಿತ್ತು. ಇಂತದ್ದೇ ಸಾಮ್ಯತೆಯ ಘಟನೆ ರಾಮಮಂದಿರದ ಉದ್ಘಾಟನೆಯ ಹೊಸ್ತಿಲಲ್ಲಿ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರತಿನಿಧಿಸುವ ಕುಂಕುರಿ  ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್‌ ಸಮುದಾಯದ ಜನರ ಗುಂಪಿನ ಮೇಲೆ ಜನವರಿ 21ರಂದು ಹಿಂದುತ್ವದ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸ್ಥಳೀಯರಾದ ಶಿವಪ್ರಸಾದ್ ಮೆಹ್ತೋ, ಪಾದ್ರಿ ಮಹಾನಂದ ಎಫ್‌ಐಆರ್‌ ದಾಖಲಿಸಿದ್ದು, ದುಲ್ದುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಸುದೋಪುರ ಗ್ರಾಮದ ಶಿವನ ಮನೆಗೆ ಊಟಕ್ಕೆಂದು ತೆರಳಿದ್ದೆವು. ಊಟ ಮುಗಿಸಿ ವಾಪಸ್ಸು ಬರುವಾಗ ನಮ್ಮ ಮೇಲೆ ಹಿಂದುತ್ವವಾದಿ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಜನರಿಗೆ ಗ್ರಾಮಕ್ಕೆ ಮತ್ತೆ ಭೇಟಿ ನೀಡದಂತೆ ಬೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಕ್ರಿಶ್ಚಿಯನ್‌ ಸಮುದಾಯ ಜನರ ತಂಡದಲ್ಲಿದ್ದ ಕಿಶೋರ್, ನಾವು ಶಿವ ಅವರ ಮನೆಯಿಂದ ವಾಪಾಸ್ಸು ಬರುವಾಗ ಅವರು ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ನಮ್ಮನ್ನು ತಡೆದಿದ್ದಾರೆ. ಅದೇ ಜನರು ರಾಮ ಮಂದಿರದ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಉತ್ತರ ಭಾರತದ ವಿವಿಧ ಭಾಗಗಳಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ನಡೆದಿತ್ತು. ಅವರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಈ ವೇಳೆ ತಡೆಯಲು ಪ್ರಯತ್ನಿಸಿದ ಮಹಿಳೆಯರನ್ನು ರಸ್ತೆಯಲ್ಲಿ ಎಳೆದಾಡಿ ದೌರ್ನಜ್ಯ ನಡೆಸಿದ್ದಾರೆ. ಘಟನೆ ವೇಳೆ ಪಾದ್ರಿ ಮಹಾನಂದ ಪ್ರಜ್ಞೆ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಸ್ಥಳೀಯ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿಂದ ಅವರನ್ನು ಕುಂಕೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾದ ನರೇಶ್ ಕುಮಾರ್ ಯಾದವ್ ಮತ್ತು ಇತರರು ಶಿವ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಪಾದ್ರಿ ಮತ್ತು ಇತರರನ್ನು ಗ್ರಾಮಕ್ಕೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದೇವೆ ಈ ವೇಳೆ ಅವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ವರದಿಯ ಪ್ರಕಾರ 2023ರಲ್ಲಿ 23 ರಾಜ್ಯಗಳಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರ ಸಂಭವಿಸಿದೆ. ಉತ್ತರ ಪ್ರದೇಶವೊಂದರಲ್ಲೇ 155 ಘಟನೆಗಳು ನಡೆದಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದಲ್ಲಿ ಉತ್ತರಪ್ರದೇಶ ಮುಂಚೂಣಿಯಲ್ಲಿದೆ. ಛತ್ತೀಸ್‌ಗಢದಲ್ಲಿ 84 ಘಟನೆಗಳು ನಡೆದಿದೆ. ಕಳೆದವಾರ  ಜಶ್ಪುರ್ ಪ್ರದೇಶದಲ್ಲಿ ಹಿಂದುತ್ವದ ಗುಂಪು ಐವರು ಪಾದ್ರಿಗಳನ್ನು ಥಳಿಸಿದ್ದರು.

ಜನವರಿ 21ರಂದು ಕುಂದ್ರಾ ಗ್ರಾಮದಲ್ಲಿ ಹಿಂದುತ್ವವಾದಿಗಳ ಗುಂಪೊಂದು ಸ್ಥಳೀಯ ಪಾದ್ರಿಯ ಮನೆಗೆ ನುಗ್ಗಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಮನೆಯಲ್ಲಿ ಕೇಸರಿ ಧ್ವಜವನ್ನು ಹಾರಾಟ ಮಾಡಿದ್ದಾರೆ ಎಂದು ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂ ಹೇಳಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಳೆದ ಭಾನುವಾರದಂದು ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿದ ದುಷ್ಕರ್ಮಿಗಳ ಗುಂಪು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಇದನ್ನು ಓದಿ: ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...