Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

- Advertisement -
- Advertisement -

ದೇಶದಲ್ಲಿ ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪುಗಳ ದೌರ್ಜನ್ಯ ಮುಂದುವರಿದಿದೆ. ಮತಾಂತರದ ಆರೋಪದಲ್ಲಿ ಕ್ರಿಶ್ಚಿಯನ್‌ ಪಾದ್ರಿಗಳು, ಪ್ರಾರ್ಥನಾ ಸಭೆಗಳ ಮೇಲೆ ದಾಳಿಗಳು, ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ದೇಶದ ವಿವಿಧೆಡೆ ಈ ಮೊದಲು ನಡೆದಿತ್ತು. ಇಂತದ್ದೇ ಸಾಮ್ಯತೆಯ ಘಟನೆ ರಾಮಮಂದಿರದ ಉದ್ಘಾಟನೆಯ ಹೊಸ್ತಿಲಲ್ಲಿ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಪ್ರತಿನಿಧಿಸುವ ಕುಂಕುರಿ  ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್‌ ಸಮುದಾಯದ ಜನರ ಗುಂಪಿನ ಮೇಲೆ ಜನವರಿ 21ರಂದು ಹಿಂದುತ್ವದ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸ್ಥಳೀಯರಾದ ಶಿವಪ್ರಸಾದ್ ಮೆಹ್ತೋ, ಪಾದ್ರಿ ಮಹಾನಂದ ಎಫ್‌ಐಆರ್‌ ದಾಖಲಿಸಿದ್ದು, ದುಲ್ದುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬಸುದೋಪುರ ಗ್ರಾಮದ ಶಿವನ ಮನೆಗೆ ಊಟಕ್ಕೆಂದು ತೆರಳಿದ್ದೆವು. ಊಟ ಮುಗಿಸಿ ವಾಪಸ್ಸು ಬರುವಾಗ ನಮ್ಮ ಮೇಲೆ ಹಿಂದುತ್ವವಾದಿ ಗುಂಪಿನ ಸದಸ್ಯರು ಹಲ್ಲೆ ನಡೆಸಿದ್ದಾರೆ ಮತ್ತು ಸಮುದಾಯದ ಜನರಿಗೆ ಗ್ರಾಮಕ್ಕೆ ಮತ್ತೆ ಭೇಟಿ ನೀಡದಂತೆ ಬೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಕ್ರಿಶ್ಚಿಯನ್‌ ಸಮುದಾಯ ಜನರ ತಂಡದಲ್ಲಿದ್ದ ಕಿಶೋರ್, ನಾವು ಶಿವ ಅವರ ಮನೆಯಿಂದ ವಾಪಾಸ್ಸು ಬರುವಾಗ ಅವರು ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ನಮ್ಮನ್ನು ತಡೆದಿದ್ದಾರೆ. ಅದೇ ಜನರು ರಾಮ ಮಂದಿರದ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಉತ್ತರ ಭಾರತದ ವಿವಿಧ ಭಾಗಗಳಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮೆರವಣಿಗೆ ನಡೆದಿತ್ತು. ಅವರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಈ ವೇಳೆ ತಡೆಯಲು ಪ್ರಯತ್ನಿಸಿದ ಮಹಿಳೆಯರನ್ನು ರಸ್ತೆಯಲ್ಲಿ ಎಳೆದಾಡಿ ದೌರ್ನಜ್ಯ ನಡೆಸಿದ್ದಾರೆ. ಘಟನೆ ವೇಳೆ ಪಾದ್ರಿ ಮಹಾನಂದ ಪ್ರಜ್ಞೆ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬವು ಅವರನ್ನು ಸ್ಥಳೀಯ ಸ್ವಾಸ್ಥ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿಂದ ಅವರನ್ನು ಕುಂಕೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾದ ನರೇಶ್ ಕುಮಾರ್ ಯಾದವ್ ಮತ್ತು ಇತರರು ಶಿವ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಪಾದ್ರಿ ಮತ್ತು ಇತರರನ್ನು ಗ್ರಾಮಕ್ಕೆ ಏಕೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದೇವೆ ಈ ವೇಳೆ ಅವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲಾಗಿದೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ವರದಿಯ ಪ್ರಕಾರ 2023ರಲ್ಲಿ 23 ರಾಜ್ಯಗಳಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರ ಸಂಭವಿಸಿದೆ. ಉತ್ತರ ಪ್ರದೇಶವೊಂದರಲ್ಲೇ 155 ಘಟನೆಗಳು ನಡೆದಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದಲ್ಲಿ ಉತ್ತರಪ್ರದೇಶ ಮುಂಚೂಣಿಯಲ್ಲಿದೆ. ಛತ್ತೀಸ್‌ಗಢದಲ್ಲಿ 84 ಘಟನೆಗಳು ನಡೆದಿದೆ. ಕಳೆದವಾರ  ಜಶ್ಪುರ್ ಪ್ರದೇಶದಲ್ಲಿ ಹಿಂದುತ್ವದ ಗುಂಪು ಐವರು ಪಾದ್ರಿಗಳನ್ನು ಥಳಿಸಿದ್ದರು.

ಜನವರಿ 21ರಂದು ಕುಂದ್ರಾ ಗ್ರಾಮದಲ್ಲಿ ಹಿಂದುತ್ವವಾದಿಗಳ ಗುಂಪೊಂದು ಸ್ಥಳೀಯ ಪಾದ್ರಿಯ ಮನೆಗೆ ನುಗ್ಗಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಮನೆಯಲ್ಲಿ ಕೇಸರಿ ಧ್ವಜವನ್ನು ಹಾರಾಟ ಮಾಡಿದ್ದಾರೆ ಎಂದು ಛತ್ತೀಸ್‌ಗಢ ಕ್ರಿಶ್ಚಿಯನ್ ಫೋರಂ ಹೇಳಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಕಳೆದ ಭಾನುವಾರದಂದು ಮಧ್ಯಪ್ರದೇಶದ ಝಬುವಾದಲ್ಲಿ ಚರ್ಚ್‌ವೊಂದರ ಮೇಲೆ ಹತ್ತಿದ ದುಷ್ಕರ್ಮಿಗಳ ಗುಂಪು ಕೇಸರಿ ಧ್ವಜವನ್ನು ಹಾರಾಟ ನಡೆಸಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವಿಡಿಯೋವು ದುಷ್ಕರ್ಮಿಯೋರ್ವ ಚರ್ಚ್‌ ಮೇಲೆ ಹತ್ತಿ ಕೇಸರಿ ಧ್ವಜವನ್ನು ಹಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಸರಿ ಧ್ವಜದಲ್ಲಿ ಅಯೋಧ್ಯೆಯ ರಾಮ ಮಂದಿರದ ಚಿತ್ರವಿತ್ತು ಮತ್ತು ಅದರ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆಯಲಾಗಿತ್ತು.

ಇದನ್ನು ಓದಿ: ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...