Homeಮುಖಪುಟಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

- Advertisement -
- Advertisement -

ನಿರಾಯುಧನಾದ ವ್ಯಕ್ತಿಯೊಬ್ಬನನ್ನು ತಮ್ಮನ್ನು ತಾವು ಗೋರಕ್ಷರೆಂದು ಕರೆದುಕೊಳ್ಳುವ ಹಲವಾರು ಮಂದಿ ಸುತ್ತಿಗೆಯಿಂದ ನಿರ್ಧಯವಾಗಿ ಥಳಿಸುತ್ತಿದ್ದಾರೆ. ಕಾಲಿನಿಂದ ಒದೆಯುತ್ತಿದ್ದಾರೆ. ಆದರೆ ಅಲ್ಲಿಯೇ ಇರುವ ಪೊಲೀಸರು ಕೈಕಟ್ಟಿಕೊಂಡು ನೋಡುತ್ತಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ರಾಷ್ಟ್ರರಾಜಧಾನಿ ಬಳಿಯ ಗುರ್ಗಾವ್‌ನಲ್ಲಿ ನಡೆದಿದೆ. ಇದು ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದನ್ನು ಅಥವಾ ಬಲಾಢ್ಯರ ಪರ ಇರುವುದನ್ನು ತೋರಿಸುತ್ತಿದೆ.

ಲುಕ್ಮನ್ ಎಂದು ಗುರುತಿಸಲ್ಪಟ್ಟ ಚಾಲಕನನ್ನು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹರಿಯಾಣದ ಗುರ್ಗಾವ್‌ನಲ್ಲಿ ಅಮಾನವೀಯವಾಗಿ ಥಳಿಸಲಾಗಿದೆ. ನಂತರ ಆತನನ್ನು ಟ್ರಕ್‌ ಒಂದಕ್ಕೆ ಕಟ್ಟಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಮನಬಂದಂತೆ ಥಳಿಸಿದ್ದಾರೆ. ಅಲ್ಲಿಯೂ ಯಥಾ ಪ್ರಕಾರ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ ಇದಕ್ಕೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಲಾಗಿದೆ.

ಈ ಒಟ್ಟಾರೆ ಘಟನೆಯ ವಿಡಿಯೋಗಳು ಹರಿದಾಡುತ್ತಿವೆ. ಅದರಲ್ಲಿ ಹಲ್ಲೆ ನಡೆಸಿದವರ ಮುಖಚರ್ಯೆಗಳು ಸ್ಪಷ್ಟವಾಗಿ ದಾಖಲಾಗಿದ್ದರೂ ಸಹ ಪೊಲೀಸರು ಕೇವಲ ಒಬ್ಬನನ್ನು ಮಾತ್ರ ಬಂಧಿಸಿದ್ದಾರೆ ಮತ್ತು ಅಪರಿಚಿತರ ಮೇಲೆ ದೂರು ದಾಖಲಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ” ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದುವರೆಗೂ ಹತ್ತಾರು ಗುಂಪುಹಲ್ಲೆ ಪ್ರಕರಣಗಳು ವರದಿಯಾಗಿವೆ. ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಬಹುತೇಕರು ಮುಸ್ಲಿಮರಾಗಿದ್ದಾರೆ. ಈ ಕುರಿತು ವ್ಯಾಪಕ ಟೀಕೆಗಳು ಕೇಳಿಬಂದ ನಂತರ ಪ್ರಧಾನಿ ಮೋದಿಯವರು ಗುಂಪು ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು. ಆದರೂ ಅವು ಮುಂದುವರೆಯುತ್ತಲೇ ಇವೆ.


ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕ್ರೌರ್ಯದ ಪರಮಾವಧಿ. ಮೂಕಪ್ರೇಕ್ಶಕರಾಗಿ ವರ್ತಿಸಿರುವ ಪೊಲೀಸರನ್ನು ಮೊದಲು ಸೇವೆಯಿಂದ ವಜಾಗೊಳಿಸಬೇಕು.

  2. ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದು ಕೊಳ್ಳುವ ವರನ್ನು ಸುಮ್ಮನೆ ಬಿಡಬಾರದು… ಇದೊಂದು ಅತ್ಯಂತ ಹೇಯ ಕೃತ್ಯ…. ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಾರೆ ಎಂದು ಭಾವಿಸುತ್ತೇನೆ….

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...