Homeಮುಖಪುಟಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

- Advertisement -
- Advertisement -

ನಿರಾಯುಧನಾದ ವ್ಯಕ್ತಿಯೊಬ್ಬನನ್ನು ತಮ್ಮನ್ನು ತಾವು ಗೋರಕ್ಷರೆಂದು ಕರೆದುಕೊಳ್ಳುವ ಹಲವಾರು ಮಂದಿ ಸುತ್ತಿಗೆಯಿಂದ ನಿರ್ಧಯವಾಗಿ ಥಳಿಸುತ್ತಿದ್ದಾರೆ. ಕಾಲಿನಿಂದ ಒದೆಯುತ್ತಿದ್ದಾರೆ. ಆದರೆ ಅಲ್ಲಿಯೇ ಇರುವ ಪೊಲೀಸರು ಕೈಕಟ್ಟಿಕೊಂಡು ನೋಡುತ್ತಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ರಾಷ್ಟ್ರರಾಜಧಾನಿ ಬಳಿಯ ಗುರ್ಗಾವ್‌ನಲ್ಲಿ ನಡೆದಿದೆ. ಇದು ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದನ್ನು ಅಥವಾ ಬಲಾಢ್ಯರ ಪರ ಇರುವುದನ್ನು ತೋರಿಸುತ್ತಿದೆ.

ಲುಕ್ಮನ್ ಎಂದು ಗುರುತಿಸಲ್ಪಟ್ಟ ಚಾಲಕನನ್ನು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹರಿಯಾಣದ ಗುರ್ಗಾವ್‌ನಲ್ಲಿ ಅಮಾನವೀಯವಾಗಿ ಥಳಿಸಲಾಗಿದೆ. ನಂತರ ಆತನನ್ನು ಟ್ರಕ್‌ ಒಂದಕ್ಕೆ ಕಟ್ಟಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಮನಬಂದಂತೆ ಥಳಿಸಿದ್ದಾರೆ. ಅಲ್ಲಿಯೂ ಯಥಾ ಪ್ರಕಾರ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ ಇದಕ್ಕೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಲಾಗಿದೆ.

ಈ ಒಟ್ಟಾರೆ ಘಟನೆಯ ವಿಡಿಯೋಗಳು ಹರಿದಾಡುತ್ತಿವೆ. ಅದರಲ್ಲಿ ಹಲ್ಲೆ ನಡೆಸಿದವರ ಮುಖಚರ್ಯೆಗಳು ಸ್ಪಷ್ಟವಾಗಿ ದಾಖಲಾಗಿದ್ದರೂ ಸಹ ಪೊಲೀಸರು ಕೇವಲ ಒಬ್ಬನನ್ನು ಮಾತ್ರ ಬಂಧಿಸಿದ್ದಾರೆ ಮತ್ತು ಅಪರಿಚಿತರ ಮೇಲೆ ದೂರು ದಾಖಲಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ” ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದುವರೆಗೂ ಹತ್ತಾರು ಗುಂಪುಹಲ್ಲೆ ಪ್ರಕರಣಗಳು ವರದಿಯಾಗಿವೆ. ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಬಹುತೇಕರು ಮುಸ್ಲಿಮರಾಗಿದ್ದಾರೆ. ಈ ಕುರಿತು ವ್ಯಾಪಕ ಟೀಕೆಗಳು ಕೇಳಿಬಂದ ನಂತರ ಪ್ರಧಾನಿ ಮೋದಿಯವರು ಗುಂಪು ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು. ಆದರೂ ಅವು ಮುಂದುವರೆಯುತ್ತಲೇ ಇವೆ.


ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕ್ರೌರ್ಯದ ಪರಮಾವಧಿ. ಮೂಕಪ್ರೇಕ್ಶಕರಾಗಿ ವರ್ತಿಸಿರುವ ಪೊಲೀಸರನ್ನು ಮೊದಲು ಸೇವೆಯಿಂದ ವಜಾಗೊಳಿಸಬೇಕು.

  2. ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದು ಕೊಳ್ಳುವ ವರನ್ನು ಸುಮ್ಮನೆ ಬಿಡಬಾರದು… ಇದೊಂದು ಅತ್ಯಂತ ಹೇಯ ಕೃತ್ಯ…. ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಾರೆ ಎಂದು ಭಾವಿಸುತ್ತೇನೆ….

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...