Homeಮುಖಪುಟಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

- Advertisement -
- Advertisement -

ನಿರಾಯುಧನಾದ ವ್ಯಕ್ತಿಯೊಬ್ಬನನ್ನು ತಮ್ಮನ್ನು ತಾವು ಗೋರಕ್ಷರೆಂದು ಕರೆದುಕೊಳ್ಳುವ ಹಲವಾರು ಮಂದಿ ಸುತ್ತಿಗೆಯಿಂದ ನಿರ್ಧಯವಾಗಿ ಥಳಿಸುತ್ತಿದ್ದಾರೆ. ಕಾಲಿನಿಂದ ಒದೆಯುತ್ತಿದ್ದಾರೆ. ಆದರೆ ಅಲ್ಲಿಯೇ ಇರುವ ಪೊಲೀಸರು ಕೈಕಟ್ಟಿಕೊಂಡು ನೋಡುತ್ತಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ರಾಷ್ಟ್ರರಾಜಧಾನಿ ಬಳಿಯ ಗುರ್ಗಾವ್‌ನಲ್ಲಿ ನಡೆದಿದೆ. ಇದು ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದನ್ನು ಅಥವಾ ಬಲಾಢ್ಯರ ಪರ ಇರುವುದನ್ನು ತೋರಿಸುತ್ತಿದೆ.

ಲುಕ್ಮನ್ ಎಂದು ಗುರುತಿಸಲ್ಪಟ್ಟ ಚಾಲಕನನ್ನು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹರಿಯಾಣದ ಗುರ್ಗಾವ್‌ನಲ್ಲಿ ಅಮಾನವೀಯವಾಗಿ ಥಳಿಸಲಾಗಿದೆ. ನಂತರ ಆತನನ್ನು ಟ್ರಕ್‌ ಒಂದಕ್ಕೆ ಕಟ್ಟಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಮನಬಂದಂತೆ ಥಳಿಸಿದ್ದಾರೆ. ಅಲ್ಲಿಯೂ ಯಥಾ ಪ್ರಕಾರ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ ಇದಕ್ಕೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಲಾಗಿದೆ.

ಈ ಒಟ್ಟಾರೆ ಘಟನೆಯ ವಿಡಿಯೋಗಳು ಹರಿದಾಡುತ್ತಿವೆ. ಅದರಲ್ಲಿ ಹಲ್ಲೆ ನಡೆಸಿದವರ ಮುಖಚರ್ಯೆಗಳು ಸ್ಪಷ್ಟವಾಗಿ ದಾಖಲಾಗಿದ್ದರೂ ಸಹ ಪೊಲೀಸರು ಕೇವಲ ಒಬ್ಬನನ್ನು ಮಾತ್ರ ಬಂಧಿಸಿದ್ದಾರೆ ಮತ್ತು ಅಪರಿಚಿತರ ಮೇಲೆ ದೂರು ದಾಖಲಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ” ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದುವರೆಗೂ ಹತ್ತಾರು ಗುಂಪುಹಲ್ಲೆ ಪ್ರಕರಣಗಳು ವರದಿಯಾಗಿವೆ. ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಬಹುತೇಕರು ಮುಸ್ಲಿಮರಾಗಿದ್ದಾರೆ. ಈ ಕುರಿತು ವ್ಯಾಪಕ ಟೀಕೆಗಳು ಕೇಳಿಬಂದ ನಂತರ ಪ್ರಧಾನಿ ಮೋದಿಯವರು ಗುಂಪು ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು. ಆದರೂ ಅವು ಮುಂದುವರೆಯುತ್ತಲೇ ಇವೆ.


ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕ್ರೌರ್ಯದ ಪರಮಾವಧಿ. ಮೂಕಪ್ರೇಕ್ಶಕರಾಗಿ ವರ್ತಿಸಿರುವ ಪೊಲೀಸರನ್ನು ಮೊದಲು ಸೇವೆಯಿಂದ ವಜಾಗೊಳಿಸಬೇಕು.

  2. ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದು ಕೊಳ್ಳುವ ವರನ್ನು ಸುಮ್ಮನೆ ಬಿಡಬಾರದು… ಇದೊಂದು ಅತ್ಯಂತ ಹೇಯ ಕೃತ್ಯ…. ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಾರೆ ಎಂದು ಭಾವಿಸುತ್ತೇನೆ….

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...