Homeಮುಖಪುಟಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

- Advertisement -
- Advertisement -

ನಿರಾಯುಧನಾದ ವ್ಯಕ್ತಿಯೊಬ್ಬನನ್ನು ತಮ್ಮನ್ನು ತಾವು ಗೋರಕ್ಷರೆಂದು ಕರೆದುಕೊಳ್ಳುವ ಹಲವಾರು ಮಂದಿ ಸುತ್ತಿಗೆಯಿಂದ ನಿರ್ಧಯವಾಗಿ ಥಳಿಸುತ್ತಿದ್ದಾರೆ. ಕಾಲಿನಿಂದ ಒದೆಯುತ್ತಿದ್ದಾರೆ. ಆದರೆ ಅಲ್ಲಿಯೇ ಇರುವ ಪೊಲೀಸರು ಕೈಕಟ್ಟಿಕೊಂಡು ನೋಡುತ್ತಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ರಾಷ್ಟ್ರರಾಜಧಾನಿ ಬಳಿಯ ಗುರ್ಗಾವ್‌ನಲ್ಲಿ ನಡೆದಿದೆ. ಇದು ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದನ್ನು ಅಥವಾ ಬಲಾಢ್ಯರ ಪರ ಇರುವುದನ್ನು ತೋರಿಸುತ್ತಿದೆ.

ಲುಕ್ಮನ್ ಎಂದು ಗುರುತಿಸಲ್ಪಟ್ಟ ಚಾಲಕನನ್ನು ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹರಿಯಾಣದ ಗುರ್ಗಾವ್‌ನಲ್ಲಿ ಅಮಾನವೀಯವಾಗಿ ಥಳಿಸಲಾಗಿದೆ. ನಂತರ ಆತನನ್ನು ಟ್ರಕ್‌ ಒಂದಕ್ಕೆ ಕಟ್ಟಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಮನಬಂದಂತೆ ಥಳಿಸಿದ್ದಾರೆ. ಅಲ್ಲಿಯೂ ಯಥಾ ಪ್ರಕಾರ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ ಇದಕ್ಕೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಲಾಗಿದೆ.

ಈ ಒಟ್ಟಾರೆ ಘಟನೆಯ ವಿಡಿಯೋಗಳು ಹರಿದಾಡುತ್ತಿವೆ. ಅದರಲ್ಲಿ ಹಲ್ಲೆ ನಡೆಸಿದವರ ಮುಖಚರ್ಯೆಗಳು ಸ್ಪಷ್ಟವಾಗಿ ದಾಖಲಾಗಿದ್ದರೂ ಸಹ ಪೊಲೀಸರು ಕೇವಲ ಒಬ್ಬನನ್ನು ಮಾತ್ರ ಬಂಧಿಸಿದ್ದಾರೆ ಮತ್ತು ಅಪರಿಚಿತರ ಮೇಲೆ ದೂರು ದಾಖಲಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ” ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದುವರೆಗೂ ಹತ್ತಾರು ಗುಂಪುಹಲ್ಲೆ ಪ್ರಕರಣಗಳು ವರದಿಯಾಗಿವೆ. ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಬಹುತೇಕರು ಮುಸ್ಲಿಮರಾಗಿದ್ದಾರೆ. ಈ ಕುರಿತು ವ್ಯಾಪಕ ಟೀಕೆಗಳು ಕೇಳಿಬಂದ ನಂತರ ಪ್ರಧಾನಿ ಮೋದಿಯವರು ಗುಂಪು ಹಲ್ಲೆ ಮಾಡಬೇಡಿ ಎಂದು ಮನವಿ ಮಾಡಿದ್ದರು. ಆದರೂ ಅವು ಮುಂದುವರೆಯುತ್ತಲೇ ಇವೆ.


ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕ್ರೌರ್ಯದ ಪರಮಾವಧಿ. ಮೂಕಪ್ರೇಕ್ಶಕರಾಗಿ ವರ್ತಿಸಿರುವ ಪೊಲೀಸರನ್ನು ಮೊದಲು ಸೇವೆಯಿಂದ ವಜಾಗೊಳಿಸಬೇಕು.

  2. ಯಾವುದೇ ಕಾರಣಕ್ಕೂ ಕಾನೂನು ಕೈಗೆ ತೆಗೆದು ಕೊಳ್ಳುವ ವರನ್ನು ಸುಮ್ಮನೆ ಬಿಡಬಾರದು… ಇದೊಂದು ಅತ್ಯಂತ ಹೇಯ ಕೃತ್ಯ…. ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಾರೆ ಎಂದು ಭಾವಿಸುತ್ತೇನೆ….

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...