Homeಮುಖಪುಟ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ...

₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

300 ರೂ.ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ 11 ರಿಂದ 13 ವರ್ಷ ವಯಸ್ಸಿನ ನಾಲ್ಕು ದಲಿತ ಬಾಲಕರನ್ನು 4 ಕಿ.ಮೀ.ಗಳಷ್ಟು ದೂರ ಬೆನ್ನ ಹಿಂದೆ ಕೈಗಳನ್ನು ಕಟ್ಟಿ ಮೆರವಣಿಗೆ ನಡೆಸಿದ ಅಘಾತಕಾರಿ ಘಟನೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಬನ್‌ಭೋರಿ ಗ್ರಾಮದಲ್ಲಿ ನಡೆದಿದೆ. ಭಾಸೌರ್ ಗ್ರಾಮದ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರು ಬಾಲಕರಿಗೆ ಈ ಶಿಕ್ಷೆ ವಿಧಿಸಿದ್ದು, ಮಾತ್ರವಲ್ಲದೆ ಅವರ ಕುಟುಂಬಗಳಿಗೆ ₹ 5,000 ದಂಡ ವಿಧಿಸಿದ್ದಾರೆ.

ಘಟನೆಯು ಮಾರ್ಚ್ 7 ರಂದು ನಡೆದರೂ, ಭಾನುವಾರ ಬಾಲಕರ ಕುಟುಂಬ ಸದಸ್ಯರು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಎಸ್‌ಪಿ) ದೂರು ಸಲ್ಲಿಸಿ, ‘ಮಕ್ಕಳ ಹಕ್ಕುಗಳ ರಕ್ಷಣೆ’ ರಾಜ್ಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕುಟುಂಬಿಕರು ಸಲ್ಲಿಸಿದ ದೂರಿನ ಪ್ರಕಾರ, ಭಾಸೌರ್ ಗ್ರಾಮದ ಹುಡುಗರು ಬನ್ಭೋರಿ ಗ್ರಾಮಕ್ಕೆ ತೆರಳಿ, ಹೊಲವೊಂದರಲ್ಲಿರುವ ಸಮಾಧಿಯಿಂದ 300 ರೂ.ಗಳನ್ನು ಕದ್ದಿದ್ದಾರೆ. ಗ್ರಾಮದ ನಿವಾಸಿಗಳು ಅವರನ್ನು ಹಿಡಿದು ಭಾಸೌರ್‌ನ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರನ್ನು ಕರೆದು ಹುಡುಗರನ್ನು ಹಸ್ತಾಂತರಿಸಿದ್ದಾರೆ. ಗ್ರಾಮದ ಸರ್ಪಂಚ್ ಮತ್ತು ಇತರರು ಬಾಲಕರ ಕೈಗಳನ್ನು ಬೆನ್ನ ಹಿಂದೆ ಕಟ್ಟಿ, ಅವರನ್ನು ತಮ್ಮ ಬೈಕ್‌ಗಳ ಮುಂದಿನಿಂದ ನಡೆಯುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಬಾಲಕರು ದಲಿತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಬಾಲಕನೊಬ್ಬನ ತಂದೆ ಗುರ್ಮೀತ್ ಸಿಂಗ್ ಹೇಳುವಂತೆ, “ಅವರು ಹಲ್ಲೆ ನಡೆಸಿರುವ ಕಾರಣ ಬಾಲಕನೊಬ್ಬನ ಮಣಿಕಟ್ಟಿನ ಮೇಲೆ ಮುರಿತ ಉಂಟಾಗಿದೆ. ಈ ಬಗ್ಗೆ ನಾನು ಪೊಲೀಸ್ ಮತ್ತು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದೇನೆ. ದುಷ್ಕರ್ಮಿಗಳಿಗೆ ಶಿಕ್ಷೆಯಾಗುವ ಮೂಲಕ ನಮಗೆ ನ್ಯಾಯ ಸಿಗಬೇಕು” ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಾಲಕರು ಕಳ್ಳತನದಲ್ಲಿ ತೊಡಗಿದ್ದರು, ಇದಕ್ಕಾಗಿ ಪಂಚಾಯತ್ ಅವರಿಗೆ ಪಾಠ ಕಲಿಸಲು ಬಯಸಿತ್ತು ಎಂದು ಆರೋಪಿ ಸರ್ಪಂಚ್ ಗುರ್ನಮ್ ಸಿಂಗ್ ಹೇಳಿದ್ದಾನೆ. “ನಾವು ಬನ್ಭೋರಿ ಗ್ರಾಮವನ್ನು ತಲುಪಿದಾಗಲೇ, ಅವರ ಕೈಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ನಾವು ಅವರನ್ನು ನಡೆಯಲು ಕೇಳಿದೆವು, ಈ ಮೂಲಕ ಅವರಿಗೆ ಪಾಠ ಕಲಿಸಲು ಶಿಕ್ಷೆ ನೀಡಿದೆವು. ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ” ಎಂದು ಸರ್ಪಂಚ್ ಹೇಳಿದ್ದಾನೆ.

ಸರ್ಪಂಚ್ ಗುರ್ನಮ್ ಸಿಂಗ್ ಸೇರಿದಂತೆ ನಾಲ್ವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಧುರಿ ಸದರ್ ಪೊಲೀಸ್ ಠಾಣೆ ಉಸ್ತುವಾರಿ ದೀಪಿಂದರ್ಪಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...