Homeಮುಖಪುಟ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ...

₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

300 ರೂ.ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ 11 ರಿಂದ 13 ವರ್ಷ ವಯಸ್ಸಿನ ನಾಲ್ಕು ದಲಿತ ಬಾಲಕರನ್ನು 4 ಕಿ.ಮೀ.ಗಳಷ್ಟು ದೂರ ಬೆನ್ನ ಹಿಂದೆ ಕೈಗಳನ್ನು ಕಟ್ಟಿ ಮೆರವಣಿಗೆ ನಡೆಸಿದ ಅಘಾತಕಾರಿ ಘಟನೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಬನ್‌ಭೋರಿ ಗ್ರಾಮದಲ್ಲಿ ನಡೆದಿದೆ. ಭಾಸೌರ್ ಗ್ರಾಮದ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರು ಬಾಲಕರಿಗೆ ಈ ಶಿಕ್ಷೆ ವಿಧಿಸಿದ್ದು, ಮಾತ್ರವಲ್ಲದೆ ಅವರ ಕುಟುಂಬಗಳಿಗೆ ₹ 5,000 ದಂಡ ವಿಧಿಸಿದ್ದಾರೆ.

ಘಟನೆಯು ಮಾರ್ಚ್ 7 ರಂದು ನಡೆದರೂ, ಭಾನುವಾರ ಬಾಲಕರ ಕುಟುಂಬ ಸದಸ್ಯರು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಎಸ್‌ಪಿ) ದೂರು ಸಲ್ಲಿಸಿ, ‘ಮಕ್ಕಳ ಹಕ್ಕುಗಳ ರಕ್ಷಣೆ’ ರಾಜ್ಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕುಟುಂಬಿಕರು ಸಲ್ಲಿಸಿದ ದೂರಿನ ಪ್ರಕಾರ, ಭಾಸೌರ್ ಗ್ರಾಮದ ಹುಡುಗರು ಬನ್ಭೋರಿ ಗ್ರಾಮಕ್ಕೆ ತೆರಳಿ, ಹೊಲವೊಂದರಲ್ಲಿರುವ ಸಮಾಧಿಯಿಂದ 300 ರೂ.ಗಳನ್ನು ಕದ್ದಿದ್ದಾರೆ. ಗ್ರಾಮದ ನಿವಾಸಿಗಳು ಅವರನ್ನು ಹಿಡಿದು ಭಾಸೌರ್‌ನ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರನ್ನು ಕರೆದು ಹುಡುಗರನ್ನು ಹಸ್ತಾಂತರಿಸಿದ್ದಾರೆ. ಗ್ರಾಮದ ಸರ್ಪಂಚ್ ಮತ್ತು ಇತರರು ಬಾಲಕರ ಕೈಗಳನ್ನು ಬೆನ್ನ ಹಿಂದೆ ಕಟ್ಟಿ, ಅವರನ್ನು ತಮ್ಮ ಬೈಕ್‌ಗಳ ಮುಂದಿನಿಂದ ನಡೆಯುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಬಾಲಕರು ದಲಿತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಬಾಲಕನೊಬ್ಬನ ತಂದೆ ಗುರ್ಮೀತ್ ಸಿಂಗ್ ಹೇಳುವಂತೆ, “ಅವರು ಹಲ್ಲೆ ನಡೆಸಿರುವ ಕಾರಣ ಬಾಲಕನೊಬ್ಬನ ಮಣಿಕಟ್ಟಿನ ಮೇಲೆ ಮುರಿತ ಉಂಟಾಗಿದೆ. ಈ ಬಗ್ಗೆ ನಾನು ಪೊಲೀಸ್ ಮತ್ತು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದೇನೆ. ದುಷ್ಕರ್ಮಿಗಳಿಗೆ ಶಿಕ್ಷೆಯಾಗುವ ಮೂಲಕ ನಮಗೆ ನ್ಯಾಯ ಸಿಗಬೇಕು” ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಾಲಕರು ಕಳ್ಳತನದಲ್ಲಿ ತೊಡಗಿದ್ದರು, ಇದಕ್ಕಾಗಿ ಪಂಚಾಯತ್ ಅವರಿಗೆ ಪಾಠ ಕಲಿಸಲು ಬಯಸಿತ್ತು ಎಂದು ಆರೋಪಿ ಸರ್ಪಂಚ್ ಗುರ್ನಮ್ ಸಿಂಗ್ ಹೇಳಿದ್ದಾನೆ. “ನಾವು ಬನ್ಭೋರಿ ಗ್ರಾಮವನ್ನು ತಲುಪಿದಾಗಲೇ, ಅವರ ಕೈಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ನಾವು ಅವರನ್ನು ನಡೆಯಲು ಕೇಳಿದೆವು, ಈ ಮೂಲಕ ಅವರಿಗೆ ಪಾಠ ಕಲಿಸಲು ಶಿಕ್ಷೆ ನೀಡಿದೆವು. ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ” ಎಂದು ಸರ್ಪಂಚ್ ಹೇಳಿದ್ದಾನೆ.

ಸರ್ಪಂಚ್ ಗುರ್ನಮ್ ಸಿಂಗ್ ಸೇರಿದಂತೆ ನಾಲ್ವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಧುರಿ ಸದರ್ ಪೊಲೀಸ್ ಠಾಣೆ ಉಸ್ತುವಾರಿ ದೀಪಿಂದರ್ಪಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...