Homeಮುಖಪುಟ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ...

₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

300 ರೂ.ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ 11 ರಿಂದ 13 ವರ್ಷ ವಯಸ್ಸಿನ ನಾಲ್ಕು ದಲಿತ ಬಾಲಕರನ್ನು 4 ಕಿ.ಮೀ.ಗಳಷ್ಟು ದೂರ ಬೆನ್ನ ಹಿಂದೆ ಕೈಗಳನ್ನು ಕಟ್ಟಿ ಮೆರವಣಿಗೆ ನಡೆಸಿದ ಅಘಾತಕಾರಿ ಘಟನೆ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಬನ್‌ಭೋರಿ ಗ್ರಾಮದಲ್ಲಿ ನಡೆದಿದೆ. ಭಾಸೌರ್ ಗ್ರಾಮದ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರು ಬಾಲಕರಿಗೆ ಈ ಶಿಕ್ಷೆ ವಿಧಿಸಿದ್ದು, ಮಾತ್ರವಲ್ಲದೆ ಅವರ ಕುಟುಂಬಗಳಿಗೆ ₹ 5,000 ದಂಡ ವಿಧಿಸಿದ್ದಾರೆ.

ಘಟನೆಯು ಮಾರ್ಚ್ 7 ರಂದು ನಡೆದರೂ, ಭಾನುವಾರ ಬಾಲಕರ ಕುಟುಂಬ ಸದಸ್ಯರು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಎಸ್‌ಪಿ) ದೂರು ಸಲ್ಲಿಸಿ, ‘ಮಕ್ಕಳ ಹಕ್ಕುಗಳ ರಕ್ಷಣೆ’ ರಾಜ್ಯ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕುಟುಂಬಿಕರು ಸಲ್ಲಿಸಿದ ದೂರಿನ ಪ್ರಕಾರ, ಭಾಸೌರ್ ಗ್ರಾಮದ ಹುಡುಗರು ಬನ್ಭೋರಿ ಗ್ರಾಮಕ್ಕೆ ತೆರಳಿ, ಹೊಲವೊಂದರಲ್ಲಿರುವ ಸಮಾಧಿಯಿಂದ 300 ರೂ.ಗಳನ್ನು ಕದ್ದಿದ್ದಾರೆ. ಗ್ರಾಮದ ನಿವಾಸಿಗಳು ಅವರನ್ನು ಹಿಡಿದು ಭಾಸೌರ್‌ನ ಸರ್ಪಂಚ್ ಮತ್ತು ಪಂಚಾಯತ್ ಸದಸ್ಯರನ್ನು ಕರೆದು ಹುಡುಗರನ್ನು ಹಸ್ತಾಂತರಿಸಿದ್ದಾರೆ. ಗ್ರಾಮದ ಸರ್ಪಂಚ್ ಮತ್ತು ಇತರರು ಬಾಲಕರ ಕೈಗಳನ್ನು ಬೆನ್ನ ಹಿಂದೆ ಕಟ್ಟಿ, ಅವರನ್ನು ತಮ್ಮ ಬೈಕ್‌ಗಳ ಮುಂದಿನಿಂದ ನಡೆಯುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಬಾಲಕರು ದಲಿತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಬಾಲಕನೊಬ್ಬನ ತಂದೆ ಗುರ್ಮೀತ್ ಸಿಂಗ್ ಹೇಳುವಂತೆ, “ಅವರು ಹಲ್ಲೆ ನಡೆಸಿರುವ ಕಾರಣ ಬಾಲಕನೊಬ್ಬನ ಮಣಿಕಟ್ಟಿನ ಮೇಲೆ ಮುರಿತ ಉಂಟಾಗಿದೆ. ಈ ಬಗ್ಗೆ ನಾನು ಪೊಲೀಸ್ ಮತ್ತು ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದೇನೆ. ದುಷ್ಕರ್ಮಿಗಳಿಗೆ ಶಿಕ್ಷೆಯಾಗುವ ಮೂಲಕ ನಮಗೆ ನ್ಯಾಯ ಸಿಗಬೇಕು” ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಾಲಕರು ಕಳ್ಳತನದಲ್ಲಿ ತೊಡಗಿದ್ದರು, ಇದಕ್ಕಾಗಿ ಪಂಚಾಯತ್ ಅವರಿಗೆ ಪಾಠ ಕಲಿಸಲು ಬಯಸಿತ್ತು ಎಂದು ಆರೋಪಿ ಸರ್ಪಂಚ್ ಗುರ್ನಮ್ ಸಿಂಗ್ ಹೇಳಿದ್ದಾನೆ. “ನಾವು ಬನ್ಭೋರಿ ಗ್ರಾಮವನ್ನು ತಲುಪಿದಾಗಲೇ, ಅವರ ಕೈಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ನಾವು ಅವರನ್ನು ನಡೆಯಲು ಕೇಳಿದೆವು, ಈ ಮೂಲಕ ಅವರಿಗೆ ಪಾಠ ಕಲಿಸಲು ಶಿಕ್ಷೆ ನೀಡಿದೆವು. ನಾವು ಯಾರ ಮೇಲೂ ಹಲ್ಲೆ ಮಾಡಿಲ್ಲ” ಎಂದು ಸರ್ಪಂಚ್ ಹೇಳಿದ್ದಾನೆ.

ಸರ್ಪಂಚ್ ಗುರ್ನಮ್ ಸಿಂಗ್ ಸೇರಿದಂತೆ ನಾಲ್ವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಧುರಿ ಸದರ್ ಪೊಲೀಸ್ ಠಾಣೆ ಉಸ್ತುವಾರಿ ದೀಪಿಂದರ್ಪಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...