Homeಮುಖಪುಟ'ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?'..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

- Advertisement -
- Advertisement -

ಭಾರತ ಎ ತಂಡದಿಂದ ಸರ್ಫರಾಝ್ ಖಾನ್ ಅವರನ್ನು ಹೊರಗಿಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ದ ಜನರು ಧಾರ್ಮಿಕ ಪಕ್ಷಪಾತದ ಆರೋಪ ಮಾಡಿದ್ದಾರೆ.

ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಭಾರತ ಎ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ್ ಧಾರ್ಮಿಕ ಪಕ್ಷಪಾತ ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಪರೋಕ್ಷವಾಗಿ ಆರೋಪಿಸಿದ್ದಾರೆ.

ಭಾರತ ಎ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಇದರಲ್ಲಿ ಸರ್ಫರಾಝ್ ಖಾನ್‌ರನ್ನು ಕೈಬಿಡುವ ಮೂಲಕ ಬಿಸಿಸಿಐ ಟೀಕೆಗೆ ಗುರಿಯಾಗಿದೆ. ಈ ನಿರ್ಧಾರವು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರನೊಬ್ಬನಿಗೆ ಮಾಡಿರುವ ಅನ್ಯಾಯ ಎಂದು ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬಿಸಿಸಿಐ ನಿರ್ಧಾರವು ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಝ್ ಖಾನ್ ಎರಡನೇ ಶ್ರೇಣಿಯ ತಂಡದಲ್ಲಿ ಸ್ಥಾನಕ್ಕಾಗಿ ಪರಿಗಣನೆಯಲ್ಲಿಯೇ ಇದ್ದಾರೆಯೇ ಎಂಬ ಸಂಶಯವನ್ನು ಹುಟ್ಟುಹಾಕಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್, ಸರ್ಫರಾಝ್ ಅವರನ್ನು ಉಪನಾಮದ ಕಾರಣಕ್ಕೆ ಕೈ ಬಿಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. “ಈ ವಿಷಯದಲ್ಲಿ ಗೌತಮ್ ಗಂಭೀರ್ ಅವರ ನಿಲುವು ನಮಗೆ ತಿಳಿದಿದೆ” ಎಂದಿದ್ದಾರೆ.

“ಅಗರ್ಕರ್ ಮತ್ತು ಗಂಭೀರ್ ಅವರಿಂದ ಮತ್ತೊಂದು ವೃತ್ತಿಜೀವನ ನಾಶವಾಯಿತು” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಸರ್ಫರಾಝ್ ಅವರನ್ನು ಭಾರತ ಎ ತಂಡಕ್ಕೆ ಏಕೆ ಆಯ್ಕೆ ಮಾಡಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

ಸರ್ಫರಾಝ್ ಕೊನೆಯ ಬಾರಿಗೆ ರಾಷ್ಟ್ರೀಯ ತಂಡದಲ್ಲಿ 2024 ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ದೈಹಿಕ ಬದಲಾವಣೆಗಳನ್ನು ಮಾಡಿಕೊಂಡಿದ್ದರೂ, ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೆ ಕಡೆಗಣಿಸಲಾಗಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗೆ ಪರಿಗಣಿಸಿರಲಿಲ್ಲ.

ಮುಂಬರುವ ಸರಣಿಗೆ ಭಾರತ ಎ ತಂಡದಲ್ಲಿ ಸರ್ಫರಾಝ್ ಹೆಸರು ಇಲ್ಲದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿಯೇ ಆಶ್ಚರ್ಯ ಉಂಟು ಮಾಡಿದೆ.

ಬೇಸಿಗೆಯಲ್ಲಿ, ಸರ್ಫರಾಝ್ ಖಾನ್ 17 ಕೆ.ಜಿ ತೂಕ ಕಳೆದುಕೊಂಡು ಹೆಚ್ಚು ತೆಳ್ಳಗಾಗಿದ್ದಾರೆ ಮತ್ತು ತಾನೆಂದೂ ಇರದಷ್ಟು ಫಿಟ್ ಆಗಿದ್ದಾರೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡು ಪ್ರಥಮ ದರ್ಜೆ ಪಂದ್ಯಗಳಿಗೆ 15 ಜನರ ಭಾರತ ಎ ತಂಡವನ್ನು ಹೆಸರಿಸಿದೆ.

ಮಂಗಳವಾರ, ಬಿಸಿಸಿಐ ದಕ್ಷಿಣ ಆಫ್ರಿಕಾ ಎ ವಿರುದ್ಧದ ಫಸ್ಟ್ ಕ್ಲಾಸ್ ಪಂದ್ಯಗಳಿಗಾಗಿ 15 ಸದಸ್ಯರ ಭಾರತ ಎ ತಂಡವನ್ನು ಪ್ರಕಟಿಸಿದೆ.

ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...